ಶ್ರೀರಂಗಪಟ್ಟಣ: ಬೆಂಗಳೂರಿನಿಂದ ಮೈಸೂರಿಗೆ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ ₹ 50 ಲಕ್ಷ ನಗದನ್ನು ಪೊಲೀಸರು ಸೋಮವಾರ ವಶಪಡಿಸಿಕೊಂಡಿದ್ದಾರೆ.
ತಾಲ್ಲೂಕಿನ ಗಡಿ ಭಾಗದ ಕಳಸ್ತವಾಡಿ ಚೆಕ್ ಪೋಸ್ಟ್ ಬಳಿ ಕಾರು ತಡೆದು ತಪಾಸಣೆ ನಡೆಸಿದಾಗಿ ನಗದು ಪತ್ತೆಯಾಗಿದೆ. ನಾಲ್ವರು ಮಹಿಳೆಯರು ಮತ್ತು ಒಬ್ಬ ಪುರುಷ ಇದ್ದ ಕಾರಿನಲ್ಲಿ ಹಣವನ್ನು ಕೊಂಡೊಯ್ಯಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.