ADVERTISEMENT

ಮಂಡ್ಯ | ಸೋನಿಯಾ ಮೆಚ್ಚಿಸಲು ಸಮೀಕ್ಷೆ: ಆರ್‌.ಅಶೋಕ್‌ ಟೀಕೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2025, 12:34 IST
Last Updated 22 ಸೆಪ್ಟೆಂಬರ್ 2025, 12:34 IST
   

ಮಂಡ್ಯ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹಿಂದೆ ಮತಾಂತರದ ಹುನ್ನಾರವಿದೆ. ಮತಾಂತರಕ್ಕೆ ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ವೇದಿಕೆ ಸೃಷ್ಟಿಸಿದ್ದಾರೆ. ಸೋನಿಯಾ ಗಾಂಧಿ ಅವರನ್ನು ಮೆಚ್ಚಿಸಲು ಮತ್ತು ಸಿಎಂ ಸ್ಥಾನವನ್ನು ಉಳಿಸಿಕೊಳ್ಳಲು ಹಿಂದೂ ಧರ್ಮ ಒಡೆದು, ಮುಸ್ಲಿಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಿಸುವ ಷಡ್ಯಂತ್ರ ಮಾಡುತ್ತಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದರು. 

‘ರಾಜ್ಯದ 7 ಕೋಟಿ ಜನರನ್ನು 15 ದಿನಗಳಲ್ಲಿ ಸಮೀಕ್ಷೆ ಮಾಡಲು ಸಾಧ್ಯವೇ? ಇದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಾಗಿದ್ದರೆ ಜಾತಿ ಕಾಲಂ ಏಕೆ? ಸ್ವಪ್ರೇರಣೆಯಿಂದ ಬೇಕಾದ ಜಾತಿ ಬರೆಸಲು ಅವಕಾಶ ಕೊಟ್ಟಿರುವುದು ಏಕೆ? ಜಾತಿ ಗಣತಿ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರವಿದೆ. ರಾಜ್ಯಕ್ಕೆ ಅಧಿಕಾರವಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT