ADVERTISEMENT

ಕೆ.ಆರ್.ಪೇಟೆ: ಸಂಭ್ರಮದ ಮಾದೇಶ್ವರರ ಹೂವಿನ ಪಲ್ಲಕ್ಕಿ ರಥೋತ್ಸವ  

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2026, 5:07 IST
Last Updated 15 ಫೆಬ್ರುವರಿ 2026, 5:07 IST
ಕೆ.ಆರ್.ಪೇಟೆ ಪಟ್ಟಣದಲ್ಲಿ ಮಹಾಶಿವರಾತ್ರಿ ಅಂಗವಾಗಿ ಮಲೆ ಮಹದೇಶ್ವರ ಸ್ವಾಮಿಯವರ ಹೂವಿನ ಪಲ್ಲಕ್ಕಿ ರಥೋತ್ಸವದ ನಿಮಿತ್ತ ವಿಶೇಷ ಪೂಜೆ ನಡೆಯಿತು 
ಕೆ.ಆರ್.ಪೇಟೆ ಪಟ್ಟಣದಲ್ಲಿ ಮಹಾಶಿವರಾತ್ರಿ ಅಂಗವಾಗಿ ಮಲೆ ಮಹದೇಶ್ವರ ಸ್ವಾಮಿಯವರ ಹೂವಿನ ಪಲ್ಲಕ್ಕಿ ರಥೋತ್ಸವದ ನಿಮಿತ್ತ ವಿಶೇಷ ಪೂಜೆ ನಡೆಯಿತು    

ಕೆ.ಆರ್.ಪೇಟೆ: ಪಟ್ಟಣದಲ್ಲಿ ಹೊರವಲಯದ ಬಂಡ ಬೋಯನಹಳ್ಳಿ ಗ್ರಾಮದಲ್ಲಿರುವ ಮಲೆ ಮಹದೇಶ್ವರ ಸ್ವಾಮಿಯವರ ಶಿವ ಪಾರ್ವತಿ ಹೂವಿನ ಪಲ್ಲಕ್ಕಿ ರಥೋತ್ಸವವು ಮಹಾಶಿವರಾತ್ರಿಯ ಅಂಗವಾಗಿ ಜಾನಪದ ಕಲಾ ತಂಡಗಳ ಮೆರವಣಿಗೆ ಯೊಂದಿಗೆ ರಾಜಬೀದಿಗಳಲ್ಲಿ ಸಂಭ್ರಮದಿಂದ ನಡೆಯಿತು.

ಭಕ್ತರಿಗೆ ದಾಸೋಹಕ್ಕಾಗಿ ಸಂಪ್ರದಾಯದಂತೆ ಕ್ಷೇತ್ರದ ಮುಖ್ಯಸ್ಥ ಪ್ರಕಾಶ್ ಗುರೂಜಿ ಮನೆ ಮನೆಗಳಿಗೆ ತೆರಳಿ ದವಸ ಧಾನ್ಯಗಳನ್ನು ಸಂಗ್ರಹಿಸಿ ಮಾತನಾಡಿ, ‘ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗಲು ಸಾಧ್ಯವಾಗದ ಭಕ್ತರು ಕ್ಷೇತ್ರಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿ ಸಂಕಲ್ಪ ಮಾಡಿದರೆ ಕಷ್ಟ ಕಾರ್ಪಣ್ಯಗಳು ಸಂಪೂರ್ಣವಾಗಿ ಬಗೆಹರಿಯಲಿದೆ’ ಎಂದರು. ಇದೇ ಸಂದರ್ಭದಲ್ಲಿ ಹಲವು ಮಕ್ಕಳಿಗೆ ಹೆಸರಿಟ್ಟು ಆಶೀರ್ವದಿಸಲಾಯಿತು ನೂರಾರು ಭಕ್ತರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT