ADVERTISEMENT

ಎಸ್‌.ಎಂ.ಕೃಷ್ಣ ಅವರಿಂದ 100 ಸಿಲಿಂಡರ್‌

​ಪ್ರಜಾವಾಣಿ ವಾರ್ತೆ
Published 8 ಮೇ 2021, 12:08 IST
Last Updated 8 ಮೇ 2021, 12:08 IST
   

ಮಂಡ್ಯ: ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಜಿಲ್ಲೆಗೆ 100 ಜಂಬೋ ಸಿಲಿಂಡರ್‌ ಹಾಗೂ 10 ಸಾವಿರ ಎನ್‌–95 ಮಾಸ್ಕ್‌ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಆಮ್ಲಜನಕ ಪೂರೈಕೆಗೆ ಅನುಕೂಲವಾಗುವಂತೆ ತಕ್ಷಣ 100 ಜಂಬೋ ಸಿಲಿಂಡರ್‌ ನೀಡಲಾಗುವುದು. ಜಿಲ್ಲಾಸ್ಪತ್ರೆ ಹಾಗೂ ಇತರ ತಾಲ್ಲೂಕು ಆಸ್ಪತ್ರೆಗಳಲ್ಲಿ ಶಾಶ್ವತವಾಗಿ ಆಮ್ಲಜನಕ ಪೂರೈಕೆಗೆ ಬಳಸಿಕೊಳ್ಳಬೇಕು. ಜೊತೆಗೆ ಜಿಲ್ಲೆಯ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರ ಬಳಕೆಗೆ ಎನ್‌–95 ಮಾಸ್ಕ್‌ ಕೊಡಿಸಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರಿಗೆ ಪತ್ರ ಬರೆದಿರುವ ಅವರು ಸಿಲಿಂಡರ್‌ ಹಾಗೂ ಮಾಸ್ಕ್‌ಗಳನ್ನು ಶೀಘ್ರ ಪೂರೈಸಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.