ADVERTISEMENT

ಕೆಆರ್ ಪೇಟೆ | ಜೆಡಿಎಸ್ ಭದ್ರಕೋಟೆ ಭಗ್ನ; ಮಂಡ್ಯದಲ್ಲಿ ಮೊದಲ ಸಲ ಅರಳಿದ ಕಮಲ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2019, 6:54 IST
Last Updated 9 ಡಿಸೆಂಬರ್ 2019, 6:54 IST
   

ಕೆಆರ್‌ ಪೇಟೆ:ಜೆಡಿಎಸ್‌ ಪ್ರಾಬಲ್ಯ ಇರುವ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುವ ಕೆ.ಆರ್. ಪೇಟೆ ವಿಧಾನಸಭೆ ಉಪಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ‘ಕಮಲ’ ಅರಳಿದೆ.ಬಿಜೆಪಿ ಅಭ್ಯರ್ಥಿ ನಾರಾಯಣಗೌಡ, 9,728 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.

2018ರ ವಿಧಾನಸಭೆ ಚುಣಾವಣೆಯಲ್ಲಿ ಜೆಡಿಎಸ್‌ ಹುರಿಯಾಳು ಆಗಿದ್ದ ನಾರಾಯಣಗೌಡ, ಈ ಬಾರಿಬಿಜೆಪಿಯಿಂದ ಸ್ಪರ್ಧಿಸಿದ್ದರು. ತ್ರಿಕೋನ ಸ್ಪರ್ಧೆಯ ನಿರೀಕ್ಷೆ ಹುಟ್ಟಿಸಿದ್ದ ಈ ಕ್ಷೇತ್ರದ ಮತ ಎಣಿಕ ಆರಂಭದಿಂದಲೂ ನಾರಾಯಣಗೌಡ ಹಾಗೂ ಜೆಡಿಎಸ್‌ ಅಭ್ಯರ್ಥಿಬಿ.ಎಲ್.ದೇವರಾಜು ನಡುವೆ ಜಿದ್ದಾಜಿದ್ದಿ ಕಂಡು ಬಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT