ಕೆ.ಸಿ.ನಾರಾಯಣಗೌಡರ ಪರಿಚಯ
ಕ್ಷೇತ್ರ/ ಜಿಲ್ಲೆ: ಕೆ.ಆರ್.ಪೇಟೆ/ ಮಂಡ್ಯ
ವಯಸ್ಸು: 59
ವಿದ್ಯಾರ್ಹತೆ: ಎಸ್ಎಸ್ಎಲ್ಸಿ
ಜಾತಿ: ಒಕ್ಕಲಿಗ
ವೃತ್ತಿ: ಮುಂಬೈನಲ್ಲಿ ಹೋಟೆಲ್ ಉದ್ಯಮ
ರಾಜಕೀಯ ಅನುಭವ: 2008ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿಯಿಂದ ಸ್ಪರ್ಧಿಸಿ ಸೋಲು. 2013, 2018ರಲ್ಲಿ ಜೆಡಿಎಸ್ನಿಂದ ಸತತ ಎರಡು ಬಾರಿ ಗೆಲುವು. ಕಾಂಗ್ರೆಸ್–ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿದ್ದರು. 2019ರ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. ಅವರ ಗೆಲುವಿನ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತವರು ಕ್ಷೇತ್ರವಿದು. ಬಿ.ಎಸ್.ವೈ ನೇತೃತ್ವದ ಸರ್ಕಾರದಲ್ಲಿ ತೋಟಗಾರಿಕೆ ಹಾಗೂ ರೇಷ್ಮೆ ಖಾತೆ ಸಚಿವರಾಗಿದ್ದರು. ಖಾತೆ ಬದಲಾವಣೆ ಮಾಡಿ ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಜವಾಬ್ದಾರಿ ನೀಡಲಾಗಿತ್ತು. ಈಗ 2ನೇ ಬಾರಿ ಸಚಿವರಾಗುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.