ADVERTISEMENT

ಕೆಆರ್‌ಎಸ್‌ ಭರ್ತಿಗೆ ಅರ್ಧ ಅಡಿ ಬಾಕಿ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2020, 14:17 IST
Last Updated 14 ಆಗಸ್ಟ್ 2020, 14:17 IST
ಕೆಆರ್‌ಎಸ್ (ಸಂಗ್ರಹ ಚಿತ್ರ)
ಕೆಆರ್‌ಎಸ್ (ಸಂಗ್ರಹ ಚಿತ್ರ)   

ಮಂಡ್ಯ: ಕೆಆರ್‌ಎಸ್‌ ಜಲಾಶಯದ ಭರ್ತಿಗೆ ಅರ್ಧ ಅಡಿ ಮಾತ್ರವೇ ಬಾಕಿ ಉಳಿದಿದ್ದು ಶುಕ್ರವಾರ ಸಂಜೆಯ ವೇಳೆಗೆ ಜಲಾಶಯದ ನೀರಿನ ಮಟ್ಟ 124.25ಕ್ಕೆ ತಲು‍ಪಿದೆ.

ಶನಿವಾರ ಬೆಳಿಗ್ಗೆ ವೇಳೆಗೆ ಗರಿಷ್ಠ ಮಟ್ಟ (124.80 ಅಡಿ) ತಲುಪುವ ಸಾಧ್ಯತೆ ಇದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಅಪಾರ ಪ್ರಮಾಣದ ಮಳೆ ಸುರಿದ ಕಾರಣ 10 ದಿನದಿಂದೀಚೆಗೆ 16 ಅಡಿ ನೀರು ಹರಿದು ಬಂದಿದೆ.

ಶುಕ್ರವಾರ ಸಂಜೆ 10,941 ಕ್ಯುಸೆಕ್ ಒಳಹರಿವು, 3,864 ಕ್ಯುಸೆಕ್ ಹೊರಹರಿವು ದಾಖಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.