ADVERTISEMENT

ಮಡಿಕೇರಿ ಆಕಾಶವಾಣಿ ಬಳಿ ಮಣ್ಣು ಕುಸಿತ: ಅಪಾಯದಿಂದ ಪಾರಾದ 7 ಕಾರ್ಮಿಕರು

​ಪ್ರಜಾವಾಣಿ ವಾರ್ತೆ
Published 7 ಜುಲೈ 2020, 12:33 IST
Last Updated 7 ಜುಲೈ 2020, 12:33 IST
ಆಕಾಶವಾಣಿ ಟವರ್ ಬಳಿ ಮಣ್ಣು ಕುಸಿದಿರುವ ದೃಶ್ಯ
ಆಕಾಶವಾಣಿ ಟವರ್ ಬಳಿ ಮಣ್ಣು ಕುಸಿದಿರುವ ದೃಶ್ಯ   
""

ಮಡಿಕೇರಿ: ನಗರದ ಆಕಾಶವಾಣಿ ಬಳಿ ಮಣ್ಣು ಕುಸಿದಿದ್ದು 7 ಮಂದಿ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ.

ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಮಣ್ಣು ತೇವಗೊಂಡು ಮಂಗಳವಾರ ದಿಢೀರ್‌ ಕುಸಿದಿದೆ.

2018ರಲ್ಲೂ ಇದೇ ಸ್ಥಳದಲ್ಲಿ ಗುಡ್ಡ ಕುಸಿದಿತ್ತು. ಆಕಾಶವಾಣಿ ಟವರ್‌ಗೆ ಹಾನಿಯಾಗದಂತೆ ಮಣ್ಣು ಕುಸಿದಿದ್ದ ಸ್ಥಳದಲ್ಲಿ ಕಾರ್ಮಿಕರು ತಡೆಗೋಡೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ವೇಳೆ ಈ ಘಟನೆ ನಡೆದಿದೆ.

ADVERTISEMENT

ಮಣ್ಣು ಕುಸಿಯುತ್ತಿದ್ದನ್ನು ಕಂಡ ಕಾರ್ಮಿಕರು ರಸ್ತೆಗೆ ಓಡಿಬಂದ ಪರಿಣಾಮ ದುರಂತ ತಪ್ಪಿದೆ. ಅಪಾಯದ ಅರಿವಿದ್ದರೂ ತಡೆಗೋಡೆ ನಿರ್ಮಾಣ ಕಾಮಗಾರಿ ವಿಳಂಬ ಮಾಡಿದ್ದೇ ಅನಾಹುತಕ್ಕೆ ಕಾರಣವಾಗಿದೆ.

ಸ್ಥಳಕ್ಕೆ ನನಗರಸಭೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.