ADVERTISEMENT

ಹುಟ್ಟೂರಲ್ಲಿ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ: ಆದಿಚುಂಚನಗಿರಿಶ್ರೀ ಸೇರಿ ಹಲವರು ಭಾಗಿ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2024, 10:39 IST
Last Updated 11 ಡಿಸೆಂಬರ್ 2024, 10:39 IST
   

ಮಂಡ್ಯ: ಮಂಗಳವಾರ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಪಾರ್ಥಿವ ಶರೀರವನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯ ಹೊರವಲಯದ ಕೆಫೆ ಕಾಫಿ ಡೇ ಆವರಣಕ್ಕೆ ಕರೆತರಲಾಗಿದೆ.

ಸಾರ್ವಜನಿಕರಿಗೆ ಅಂತಿಮ ದರ್ಶನದ ಬಳಿಕ ಅಂತ್ಯಕ್ರಿಯೆ ನಡೆಸಲಾಗುತ್ತಿದ್ದು, ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ,

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಸ್ಪೀಕರ್ ಯು.ಟಿ.ಖಾದರ್, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ, ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಡಾ.ಎಂ.ಸಿ.ಸುಧಾಕರ್, ಎನ್. ಚಲುವರಾಯಸ್ವಾಮಿ, ಎಚ್ .ಸಿ ಮಹದೇವಪ್ಪ, ಕೆ. ವೆಂಕಟೇಶ್, ಲಕ್ಷ್ಮಿ ಹೆಬ್ಬಾಳ್ಕರ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಡಾ.ಸುಧಾಕರ್, ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ ಬಾಬು, ಶಾಸಕರಾದ ಟಿ.ಬಿ.ಜಯಚಂದ್ರ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಪಿ.ರವಿಕುಮಾರ್ ಗಣಿಗ, ಕೆ.ಎಂ.ಉದಯ, ನರೇಂದ್ರಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ, ರಮೇಶ ಬಂಡಿಸಿದ್ದೇಗೌಡ, ಕುಣಿಗಲ್ ರಂಗನಾಥ್, ಮುನಿರತ್ನ, ಎಸ್.ಟಿ.ಸೋಮಶೇಖರ್, ಎಚ್.ವಿಶ್ವನಾಥ್, ಎಸ್.ಎಂ.ಕೃಷ್ಣ ಅವರ ಪತ್ನಿ ಪ್ರೇಮಾ, ಡಿ.ಕೆ.ಶಿವಕುಮಾರ್ ಪತ್ನಿ ಉಷಾ, ಮಗಳು ಐಶ್ವರ್ಯ, ಪುತ್ರ ಆಕಾಶ್, ಎಸ್.ಎಂ.ಕೃಷ್ಣ ಅವರ ಮೊಮ್ಮಗ ಹಾಗೂ ಡಿಕೆಶಿ ಅಳಿಯ ಅಮರ್ತ್ಯ ಹೆಗಡೆ, ಎಸ್.ಎಂ.ಕೃಷ್ಣ ಅವರ ಪುತ್ರಿಯರಾದ ಮಾಳವಿಕಾ ಸಿದ್ಧಾರ್ಥ್, ಶಾಂಭವಿ ಹಾಗೂ ಅಳಿಯ ಉಮೇಶ್, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿಸಿ ತಮ್ಮಣ್ಣ, ಎಚ್.ಆಂಜನೇಯ, ಮಾಜಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಕೆ.ಅನ್ನದಾನಿ, ಕೆ.ಸುರೇಶಗೌಡ, ಎಲ್.ಆರ್.ಶಿವರಾಮೇಗೌಡ, ಬಿ.ರಾಮಕೃಷ್ಣ, ಕಲ್ಪನಾ ಸಿದ್ದರಾಜು, ಪ್ರೊ.ಕೃಷ್ಣೇಗೌಡ, ನಟ ಅಭಿಷೇಕ್ ಅಂಬರೀಶ್ ಸೇರಿದಂತೆ ಹಲವಾರು ಗಣ್ಯರು ಅಂತಿಮ ದರ್ಶನ ಪಡೆದು, ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.