ಮಂಡ್ಯ: ತಾಲ್ಲೂಕಿನ ಬಿ.ಹೊಸೂರು ಗ್ರಾಮದ ಕಬ್ಬಿನ ಗದ್ದೆಯೊಂದರಲ್ಲಿ ಶನಿವಾರ ಮೂರು ಚಿರತೆ ಮರಿಗಳು ಪತ್ತೆಯಾಗಿದ್ದು, ಗ್ರಾಮದಲ್ಲಿ ಆತಂಕ ಮನೆ ಮಾಡಿದೆ.
ಗ್ರಾಮದ ಕುಮಾರ್ ಎಂಬುವರು ತಮ್ಮ ಕಬ್ಬಿನ ಗದ್ದೆಗೆ ತೆರಳಿದ ಸಂದರ್ಭದಲ್ಲಿ ಮರಿಗಳ ಚೀರಾಟ ಕೇಳಿಸಿದೆ. ಗದ್ದೆಯ ಒಳಗೆ ಹೋಗಿ ನೋಡಿದಾಗ ಚಿರತೆ ಮರಿಗಳು ಪತ್ತೆಯಾಗಿದೆ. ತಾಯಿ ಚಿರತೆ ಹತ್ತಿರದಲ್ಲೇ ಇರುವ ಸಾಧ್ಯತೆ ಇದ್ದು, ಅದನ್ನು ಕೂಡಲೇ ಸೆರೆ ಹಿಡಿದು ಕಾಡಿಗೆ ಬಿಡಬೇಕು ರೈತರು ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಚಿರತೆ ಮರಿಗಳನ್ನು ವೀಕ್ಷಿಸಲು ಜನರು ಸೇರಿದ್ದರು. ಕೆಲವರು ಚಿರತೆ ಮರಿಗಳ ಜತೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಮರಿಗಳನ್ನು ವಶಕ್ಕೆ ಪಡೆದರು. ತಾಯಿ ಚಿರತೆಯನ್ನು ಶೀಘ್ರದಲ್ಲಿ ಸೆರೆಹಿಡಿಯಲಾಗುವುದು ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.