ADVERTISEMENT

ವಿದ್ಯುತ್ ತಂತಿ ಸ್ಪರ್ಶ: ಕೆ.ಆರ್.ಪೇಟೆಯಲ್ಲಿ ಚಿರತೆ ಸಾವು

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2024, 7:00 IST
Last Updated 11 ಆಗಸ್ಟ್ 2024, 7:00 IST
   

ಕೆ.ಆರ್.ಪೇಟೆ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಬಂಡಿಹೊಳೆ ಗ್ರಾಮದ ಹೊರವಲಯದಲ್ಲಿರುವ ದೇವರಸೇಗೌಡ ಎಂಬುವವರಿಗೆ ಸೇರಿದ ಜಮೀನಿನಲ್ಲಿ ವಿದ್ಯುತ್ ಸ್ಪರ್ಶದಿಂದ ಚಿರತೆಯು ಭಾನುವಾರ ಸಾವಿಗೀಡಾಗಿದೆ.

ಚಿರತೆಯು ಮರ ಏರಲು ಪ್ರಯತ್ನಿಸಿದಾಗ ವಿದ್ಯುತ್ ಕಂಬದ ತಂತಿ ತಗುಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ವಿಷಯ ತಿಳಿದ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.