ADVERTISEMENT

ನಿಷೇಧಾಜ್ಞೆ ಉಲ್ಲಂಘನೆ: ಐವರ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2020, 17:06 IST
Last Updated 29 ಮಾರ್ಚ್ 2020, 17:06 IST

ಕೆ.ಆರ್.ಪೇಟೆ: ಪಟ್ಟಣದಲ್ಲಿ ನಿಷೇಧಾಜ್ಞೆ ಇದ್ದರೂ ಹೇಮಾವತಿ ಬಡಾವಣೆಯ ಗ್ರಾಮಭಾರತಿ ವಿದ್ಯಾಸಂಸ್ಥೆಯ ಮುಂದೆ ನಿಂತು ಧೂಮಪಾನ ಮಾಡುತ್ತಿದ್ದ ಐವರು ಯುವಕರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಪತಹಶೀಲ್ದಾರ್ ಲಕ್ಷ್ಮೀಕಾಂತ್ ನೀಡಿದ ದೂರಿನ ಮೇರೆಗೆ ಪಟ್ಟಣ ಠಾಣೆಯ ಎಸ್.ಐ ಬ್ಯಾಟರಾಯೀಗೌಡ ಅವರು ನಿಖಿಲ್ (23), ಜಯಂತ್ ( 21), ಪದ್ಮನಾಭ್ (42) ಶ್ಯಾಮಸುಂದರ್ (33) ಹಾಗೂ ಅಭಿಷೇಕ್ (25) ವಿರುದ್ಧ ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT