
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ಮಳವಳ್ಳಿ: ದಂಡಿನ ಮಾರಮ್ಮನ ದೇವಸ್ಥಾನ ಬಳಿ ಭಾನುವಾರ ಲಾರಿ ಡಿಕ್ಕಿ ಹೊಡೆದು ಸೈಕಲ್ಗೆ ಸವಾರ ಪಟ್ಟಣದ ಗಂಗಾಮತ ಬೀದಿಯ ಕೃಷ್ಣ (38) ಸ್ಥಳದಲ್ಲಿಯೇ ಮೃತರಾಗಿದ್ದಾರೆ.
ದೇವಸ್ಥಾನದಲ್ಲಿ ಸಂಬಂಧಿಕರುನಡೆಸುವ ಪೂಜೆಯಲ್ಲಿ ಪಾಲ್ಗೊಂಡು ಮನೆಗೆ ತೆರಳಲು ತಮ್ಮಡಹಳ್ಳಿ ರಸ್ತೆಯಿಂದ ಮಳವಳ್ಳಿ-ಮದ್ದೂರು ರಸ್ತೆಗೆ ಸೈಕಲ್ನಲ್ಲಿ ತಿರುವು ಪಡೆಯುತ್ತಿದ್ದ ವೇಳೆ ಮದ್ದೂರು ಕಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದು ಕೃಷ್ಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.