ಮದ್ದೂರು: ಪಟ್ಟಣದ ಲೀಲಾವತಿ ಬಡಾವಣೆಯಲ್ಲಿರುವ ಶಾಸಕ ಡಿ.ಸಿ.ತಮ್ಮಣ್ಣ ಅವರ ಮನೆ ಮುಂದೆ ಗಲಾಟೆ ಮಾಡುತ್ತಿದ್ದ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸ್ ಸಿಬ್ಬಂದಿಗೆ ವ್ಯಕ್ತಿಯೊಬ್ಬ ಕಚ್ಚಿ ಗಾಯಗೊಳಿಸಿದ ಘಟನೆ ಭಾನುವಾರ ನಡೆದಿದೆ.
ಪಟ್ಟಣದ ನಾಗರಾಜು ಅಲಿಯಾಸ್ ಹಂದಿ ನಾಗ ಶಾಸಕರ ಮನೆ ಮುಂದೆ ಇದ್ದ ವಸ್ತುಗಳನ್ನು ನಾಶಪಡಿಸಿ ಗಲಾಟೆ ಮಾಡುತ್ತಿದ್ದ. ಈ ವೇಳೆ ಸ್ಥಳಕ್ಕೆ ಹೋದ ಕಾನ್ಸ್ಟೆಬಲ್ ಅನಿಲ್ ಕುಮಾರ್ ಅವರ ಕೈಗೆ ಕಚ್ಚಿದ್ದಾನೆ.
ಜೆಡಿಎಸ್ ಮುಖಂಡ ಚಿಕ್ಕತಮ್ಮೆಗೌಡ, ಅನಿಲ್ ಕುಮಾರ್ ನೀಡಿದ ದೂರಿನನ್ವಯ ಮದ್ದೂರು ಪೊಲೀಸರು ಆರೋಪಿಯನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.