ಮಂಡ್ಯ: ಬೆಂಗಳೂರು, ಮೈಸೂರಿನಿಂದ ಯಾರಾದರೂ ಗ್ರಾಮಕ್ಕೆ ಬಂದರೆ ₹ 5 ಸಾವಿರ ದಂಡ ವಿಧಿಸಲಾಗುವುದು ಎಂದು ತಾಲ್ಲೂಕಿನ ಬೇಲೂರು ಗ್ರಾಮದಲ್ಲಿ ಡಂಗೂರ ಸಾರಲಾಗಿದೆ.
ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಹೊರ ಜಿಲ್ಲೆಯ ಜನರು ಗ್ರಾಮಕ್ಕೆ ಕಾಲಿಡಬಾರದು ಎಂದು ಪ್ರಚಾರ ಮಾಡಲಾಗಿದೆ. ಡಂಗೂರ ಸಾರುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.