ADVERTISEMENT

ಮಂಡ್ಯ: ಡಿಸಿಸಿ ಬ್ಯಾಂಕ್‌ ಚುನಾವಣೆ; 37 ನಾಮಪತ್ರ ಸಲ್ಲಿಕೆ

ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2025, 5:32 IST
Last Updated 25 ಅಕ್ಟೋಬರ್ 2025, 5:32 IST
ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಎಂ.ಡಿ.ಸಿ.ಸಿ)
ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಎಂ.ಡಿ.ಸಿ.ಸಿ)   

ಮಂಡ್ಯ: ಇಲ್ಲಿನ ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಆಡಳಿತ ಮಂಡಳಿ ಚುನಾವಣೆಗೆ ಸಂಬಂಧಿಸಿದಂತೆ 37 ನಾಮಪತ್ರಗಳು ಶುಕ್ರವಾರ ಸಲ್ಲಿಕೆಯಾಗಿವೆ.

ಮಂಡ್ಯ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಸತೀಶ್ (ಎರಡು ನಾಮಪತ್ರ), ಸ್ವಾಮಿ, ಮದ್ದೂರು ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಪಿ.ಸಂದರ್ಶ, ಮಳವಳ್ಳಿ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಶಾಸಕ ಪಿ.ಎಂ. ನರೇಂದ್ರಸ್ವಾಮಿ, ಶಿವಲಿಂಗಯ್ಯ, ಪಾಂಡವಪುರ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಎ.ಆರ್.ಅಶೋಕ್, ಎಚ್.ಸಿ.ಪುಟ್ಟಸ್ವಾಮಿಗೌಡ.

ಶ್ರೀರಂಗಪಟ್ಟಣ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಧನಂಜಯ, ಬಿ.ಗಿರೀಶ, ಕೆ.ಆರ್.ಪೇಟೆ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಎಸ್.ಎಸ್.ಅಂಬರೀಷ್ (ಎರಡು ನಾಮಪತ್ರ), ನಾಗಮಂಗಲ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದ ಸಿ.ಸಚ್ಚಿನ್ (ಮೂರು ನಾಮಪತ್ರ), ಜಿಲ್ಲೆಯಲ್ಲಿನ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿ.ಎ.ಪಿ.ಸಿ.ಎಂ.ಎಸ್)ಗಳ ಕ್ಷೇತ್ರದಿಂದ ಕೆ.ವಿ. ದಿನೇಶ್(ಮೂರು ನಾಮಪತ್ರ).

ADVERTISEMENT

ಜಿಲ್ಲೆಯಲ್ಲಿನ ಬಳಕೆದಾರರ ಮತ್ತು ಸಂಸ್ಕರಣ ಸಹಕಾರ ಸಂಘಗಳ ಮತ್ತು ನಗರ ಸಹಕಾರಿ ಬ್ಯಾಂಕ್ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ ಎಚ್.ಅಶೋಕ್ (ಎರಡು ನಾಮಪತ್ರ), ಎಸ್.ಕೆ. ನಂಜೇಗೌಡ, ಬಿ.ಎನ್. ಹರ್ಷ, ಮಂಡ್ಯ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರ ಸಿ.ಚಲುವರಾಜು.

ವಿ.ಎಂ. ವಿಶ್ವನಾಥ್ (ಎರಡು ನಾಮಪತ್ರ), ಎಸ್.ಶಿವರಾಜ ಮತ್ತು ಪಾಂಡವಪುರ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರ ಎಂ.ಸುರೇಶ್‌ಗೌಡ (ಎರಡು ನಾಮಪತ್ರ). ಜಿ.ಈ. ರವಿಕುಮಾರ್, ಎ.ವಿಜೇಂದ್ರಮೂರ್ತಿ (ಎರಡು ನಾಮಪತ್ರ), ಎನ್.ಎಂ.ದೇವೇಗೌಡ, ಕೆ.ರಾಮಚಂದ್ರ ನಾಮಪತ್ರ ಸಲ್ಲಿಸಿದ್ದಾರೆ.

ಅಂತೆಯೇ ಜಿಲ್ಲೆಯಲ್ಲಿನ ಕೈಗಾರಿಕಾ ಸಹಕಾರ ಸಂಘಗಳು (ನೇಕಾರರ ಸಹಕಾರ ಸಂಘಗಳು ಸೇರಿದಂತೆ) ಕಾರ್ಮಿಕ ಸಹಕಾರ ಸಂಘಗಳು ಮತ್ತು ಇನ್ನಿತರೆ ಸಹಕಾರ ಸಂಘಗಳು (ಫಾರ್ಮಿಂಗ್ ಸಹಕಾರ ಸಂಘಗಳು ಸೇರಿದಂತೆ) ಕ್ಷೇತ್ರದಿಂದ ಕೆ.ಸಿ. ಜೋಗಿಗೌಡ (ಮೂರು ನಾಮಪತ್ರ) ಹಾಗೂ ಎನ್.ಮುರುಳಿ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.