ಬೆಳಕವಾಡಿ: ಸಮೀಪದ ಹೊಸಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರ ಸ್ಥಾನಗಳಿಗೆ 10 ಮಂದಿ ಅವಿರೋಧವಾಗಿ ಆಯ್ಕೆಯಾದರು.
ಸಂಘದ ಸಭಾಂಗಣದಲ್ಲಿ ಸೋಮವಾರ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡ ಸ್ಥಾನ ಹೊರತು ಪಡಿಸಿ ಉಳಿದ ಸ್ಥಾನಗಳಿಗೆ 10 ಮಂದಿ ನಾಮಪತ್ರ ಸಲ್ಲಿಸಿದ್ದರು.
ನಿರ್ದೇಶಕರಾಗಿ ಸಾಮಾನ್ಯ ಕ್ಷೇತ್ರದಿಂದ ಎಚ್.ಪಿ. ಸುರೇಶ್, ಎಚ್.ಎಂ.ಕುಮಾರ್, ಬಿ. ಪ್ರಭು, ಎಚ್.ಸಿ.ಮಹೇಶ್, ಎಚ್,ಆರ್. ಮನು, ಮಹಿಳಾ ಮೀಸಲು ಕ್ಷೇತ್ರದಿಂದ ಎನ್. ಮಧುಮಾಲಿನಿ, ಪುಟ್ಟನಂಜಮ್ಮ, ಹಿಂದುಳಿದ ವರ್ಗ ಪ್ರ ವರ್ಗ ‘ಎ’ ಮೀಸಲು ಕ್ಷೇತ್ರದಿಂದ ಗುರುಸ್ವಾಮಿ, ಹಿಂದುಳಿದ ವರ್ಗ ಪ್ರವರ್ಗ ‘ಬಿ’ ಮೀಸಲು ಕ್ಷೇತ್ರದಿಂದ ಎಚ್.ಪಿ.ರವಿ, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಎಚ್. ವೆಂಕಟೇಶ್ ಮೂರ್ತಿ ಘೋಷಿಸಿದರು.
ಸಂಘದ ಕಾರ್ಯದರ್ಶಿ ಎಚ್. ಹೊಂಬಾಳೇಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.