ADVERTISEMENT

ಮಂಡ್ಯ ಪ್ರೆಸ್‌ಕ್ಲಬ್‌ ಸೀಲ್‌ಡೌನ್‌

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 8:27 IST
Last Updated 6 ಜುಲೈ 2020, 8:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಡ್ಯ: ಶ್ರೀರಂಗಪಟ್ಟಣದ ಪತ್ರಕರ್ತರೊಬ್ಬರಿಗೆ ಕೋವಿಡ್‌–19 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪತ್ರಕರ್ತರ ಸಂಘ (ಪ್ರೆಸ್‌ ಕ್ಲಬ್‌) ಕಟ್ಟಡದ ಸುತ್ತಲೂ ಸೀಲ್‌ಡೌನ್‌ ಘೋಷಣೆ ಮಾಡಲಾಗಿದೆ.

ಸ್ಥಳೀಯ ಪತ್ರಕರ್ತರಲ್ಲಿ ಸೋಂಕು ಪತ್ತೆಯಾಗಿದೆ, ಇವರು ಈಚೆಗೆ ಜನ್ಮದಿನ ಆಚರಿಸಿಕೊಂಡಿದ್ದು ಔತಣಕೂಟದಲ್ಲಿ ಹಲವು ಪತ್ರಕರ್ತರು ಪಾಲ್ಗೊಂಡಿದ್ದು. ಹೀಗಾಗಿ ಮುಂಜಾಗೃತಾ ಕ್ರಮವಾಗಿ ಜಿಲ್ಲಾ ಪತ್ರಕರ್ತರ ಸಂಘ ಸ್ವಯಂ ಪ್ರೇರಿತವಾಗಿ ಸೀಲ್‌ಡೌನ್‌ ಘೋಷಿಸಿದೆ.

‘10 ದಿನಗಳವರೆಗೆ ಪತ್ರಿಕಾ ಭವನದಲ್ಲಿ ಕಾರ್ಯಕ್ರಮ ಹಾಗೂ ಪತ್ರಿಕಾಗೋಷ್ಠಿ ರದ್ದು ಮಾಡಲಾಗಿದೆ’ ಎಂದು ಜಿಲ್ಲಾ ಪತ್ರಕರ್ತ ಸಂಘದ ಅಧ್ಯಕ್ಷ ಕೆ.ಸಿ.ಮಂಜುನಾಥ್‌ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.