ಮಂಡ್ಯ: ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಕೆ.ಆರ್.ಪೇಟೆ ತಾಲ್ಲೂಕು ಗಂಜಿಗೆರೆ ಗ್ರಾಮದಲ್ಲಿ ಮನೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಮೃತರನ್ನು ಕುಮಾರ್ (40) ಎಂದು ಗುರುತಿಸಲಾಗಿದೆ.ಅವಶೇಷಗಳಡಿ ಸಿಲುಕಿದ ಮೃತ ದೇಹವನ್ನು ಹೊರತೆಗೆಯಲಾಗಿದೆ.
ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಕೆ.ಆರ್.ಪೇಟೆ- ಮೈಸೂರು ಮುಖ್ಯರಸ್ತೆ ಬಂದ್ ಮಾಡಲಾಗಿದೆ.
ಹಳ್ಳಗಳು ತುಂಬಿ ಹರಿಯುತ್ತಿದ್ದು, ಶಾಲಾ, ಕಾಲೇಜು ವಿದ್ಯಾರ್ಥಿಗಳ ಪರದಾಟ ಹೇಳತೀರದಾಗಿದೆ. ಇನ್ನು . ಮೈಸೂರಿಗೆ ತೆರಳುವ ವಾಹನಗಳ ಮಾರ್ಗ ಬದಲಾಯಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.