ಮೇಲುಕೋಟೆ (ಮಂಡ್ಯ): ಇಲ್ಲಿನ ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ನಿತ್ಯ ತೀರ್ಥ ಕೈಂಕರ್ಯ ನೆರವೇರಿಸುತ್ತಿದ್ದ, ‘ಮೇಲುಕೋಟೆ ಬಾಹುಬಲಿ’ ಎಂದೇ ಪ್ರಸಿದ್ಧಿ ಪಡೆದಿದ್ದ ರಾಮಸ್ವಾಮಿ ಅಯ್ಯಂಗಾರ್ (70) ಸೋಮವಾರ ಸಂಜೆ ನಿಧನರಾದರು.
ನಾಲ್ಕೈದು ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂತ್ಯಕ್ರಿಯೆ ಮೇಲುಕೋಟೆಯಲ್ಲಿ ಮಂಗಳವಾರ ನಡೆಯಿತು.
ರಾಮಸ್ವಾಮಿ ಅಯ್ಯಂಗಾರ್ ಅವರು ನಿತ್ಯ ತಾಮ್ರ ಪಾತ್ರೆಯಲ್ಲಿ 40 ಲೀಟರ್ನಷ್ಟು ನೀರನ್ನು ಕಲ್ಯಾಣಿಯಿಂದ ಯೋಗನರಸಿಂಹ ಸ್ವಾಮಿ ಬೆಟ್ಟದ ದೇವಾಲಯಕ್ಕೆ ಹೊತ್ತು ತಂದು ದೇವರಿಗೆ ಅಭಿಷೇಕ ಹಾಗೂ ಪ್ರಸಾದ ತಯಾರಿಕೆಗೆ ನೀಡುತ್ತಿದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.