ADVERTISEMENT

ಆಟೋ ಚಾಲಕರ ಸೇವೆ ಅಪಾರ: ಎಂ.ಎಸ್.ಮಹದೇವ್

​ಪ್ರಜಾವಾಣಿ ವಾರ್ತೆ
Published 29 ಮೇ 2023, 15:25 IST
Last Updated 29 ಮೇ 2023, 15:25 IST
ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಮುಂಭಾಗ ಶಂಕರ್ ನಾಗ್ ಆಟೋ ಚಾಲಕರ ಸಂಘದ ಸರ್.ಎಂ.ವಿಶ್ವೇಶ್ವರಯ್ಯ ಆಟೋ ನಿಲ್ದಾಣವನ್ನು ಪುರಸಭೆ ಮುಖ್ಯಾಧಿಕಾರಿ ಎಂ.ಎಸ್.ಮಹದೇವ್ ಉದ್ಘಾಟಿಸಿದರು. ಪುಟ್ಟಸ್ವಾಮಿ, ಎಂ.ಎನ್.ಕೃಷ್ಣ, ಅಂಕನಾಥ್, ಪೊತ್ತಂಡೆ ನಾಗರಾಜು ಇದ್ದರು.
ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಮುಂಭಾಗ ಶಂಕರ್ ನಾಗ್ ಆಟೋ ಚಾಲಕರ ಸಂಘದ ಸರ್.ಎಂ.ವಿಶ್ವೇಶ್ವರಯ್ಯ ಆಟೋ ನಿಲ್ದಾಣವನ್ನು ಪುರಸಭೆ ಮುಖ್ಯಾಧಿಕಾರಿ ಎಂ.ಎಸ್.ಮಹದೇವ್ ಉದ್ಘಾಟಿಸಿದರು. ಪುಟ್ಟಸ್ವಾಮಿ, ಎಂ.ಎನ್.ಕೃಷ್ಣ, ಅಂಕನಾಥ್, ಪೊತ್ತಂಡೆ ನಾಗರಾಜು ಇದ್ದರು.   

ಮಳವಳ್ಳಿ: ದಿನದ 24 ಗಂಟೆಯೂ ಗ್ರಾಹಕರ ಸೇವೆಯಲ್ಲಿ ತೊಡಗಿರುವ ಆಟೋ ರಿಕ್ಷಾ ಚಾಲಕರ ಸೇವೆ ಅನನ್ಯ ಎಂದು ಪುರಸಭೆ ಮುಖ್ಯಾಧಿಕಾರಿ ಎಂ.ಎಸ್.ಮಹದೇವ್ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಮುಂಭಾಗ ಶಂಕರ್ ನಾಗ್ ಆಟೋ ಚಾಲಕರ ಸಂಘದ ಸರ್.ಎಂ.ವಿಶ್ವೇಶ್ವರಯ್ಯ ಆಟೋ ನಿಲ್ದಾಣವನ್ನು ಉದ್ಘಾಟಿಸಿ, ನಟ ದಿ.ಅಂಬರೀಷ್‌ ಅವರ ಜನ್ಮದಿನಾಚರಣೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಪ್ರಾಮಾಣಿಕ ಸೇವಾ ಮನೋಭಾವದಿಂದ ಕೆಲಸ ಮಾಡುವ ಪ್ರತಿಯೊಬ್ಬರ ಜೀವನ ಸುಂದರವಾಗಿರುತ್ತದೆ. ಆಟೋ ನಿಲ್ದಾಣದ ನಿರ್ಮಾಣಕ್ಕೆ ಜಾಗ ನೀಡಲಾಗಿದೆ.  ಅವರ ಸೇವೆಗೆ ಬೆಲೆ ಕಟ್ಟಲು ಆಗುವುದಿಲ್ಲ ಎಂದು ಹೇಳಿದರು.

ADVERTISEMENT

ಮುಖಂಡ ಪೊತ್ತಂಡೆ ನಾಗರಾಜು ಮಾತನಾಡಿ, ಈ ಆಟೋ ನಿಲ್ದಾಣವನ್ನು ಪುರಸಭೆಯಲ್ಲಿ ಅನುಮೋದಿಸುವ ನಿಟ್ಟಿನಲ್ಲಿ  ಸದಸ್ಯರೊಂದಿಗೆ ಮಾತುಕತೆ ನಡೆಸಲಾಗುವುದು.  ದಿ.ಅಂಬರೀಶ್ ಅವರು ಜನಮನದಲ್ಲಿ ಅಮರ ಎಂದು ಬಣ್ಣಿಸಿದರು.

ಪುರಸಭೆ ಸದಸ್ಯರಾದ ಪುಟ್ಟಸ್ವಾಮಿ, ಎಂ.ಎನ್.ಕೃಷ್ಣ, ಮುಖಂಡ ಅಂಕನಾಥ್, ಆಟೋ ಚಾಲಕರ ಸಂಘದ ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.