ಭಾರತೀನಗರ: ಇಲ್ಲಿಗೆ ಸಮೀಪದ ದೊಡ್ಡರಸಿನಕೆರೆ ಗ್ರಾಮದಲ್ಲಿ ಸೋಮವಾರ ರಾತ್ರಿ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆಗೈಯಲಾಗಿದೆ.
ಚಿಕ್ಕಮರಿಗೌಡನ ದೊಡ್ಡಿ ಗ್ರಾಮದ ಗುಳಯ್ಯ ಅವರ ಪುತ್ರ ಶಿವು(22) ಎಂಬಾತನೇ ಹತ್ಯೆಯಾದ ಯುವಕ.
ಹನುಮಂತ ನಗರದ ಆತ್ಮಲಿಂಗೇಶ್ವರ ಜಾತ್ರೆಯಲ್ಲಿ ಮತ್ತು ದೊಡ್ಡರಸಿನಕೆರೆ ಗ್ರಾಮದಲ್ಲಿ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಜಗಳ ಉಂಟಾಗಿತ್ತು ಎಂಬುದು ತಿಳಿದು ಬಂದಿದೆ.
ದೊಡ್ಡರಸಿನಕೆರೆ ಗ್ರಾಮದ ಶ್ರೀಧರ್ ಎಂಬಾತ ಕ್ಷುಲ್ಲಕ ವಿಚಾರಕ್ಕೆ ಶಿವು ಹೊಟ್ಟೆಗೆ ಚಾಕುವಿನಿಂದ ಚುಚ್ಚಿ ಹಲ್ಲೆ ನಡೆಸಿದ್ದಾನೆ. ಸ್ಥಳದಲ್ಲೇ ಕುಸಿದು ಬಿದ್ದ ಶಿವು ಅವರನ್ನು ಭಾರತೀನಗರದ ಜಿ.ಮಾದೇಗೌಡ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದರೂ, ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾನೆ ಎಂದು ಭಾರತೀನಗರ ಪೊಲೀಸರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.