ADVERTISEMENT

ಮಂಡ್ಯ | ಪೌತಿ ಖಾತೆ ಮಾಡಿಕೊಡಲು ₹5 ಸಾವಿರ ಲಂಚ: ಲೋಕಾಯುಕ್ತ ಬಲೆಗೆ ಪಿಡಿಒ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2025, 0:07 IST
Last Updated 14 ಅಕ್ಟೋಬರ್ 2025, 0:07 IST
<div class="paragraphs"><p>ಕರ್ನಾಟಕ ಲೋಕಾಯುಕ್ತ</p></div>

ಕರ್ನಾಟಕ ಲೋಕಾಯುಕ್ತ

   

ಮದ್ದೂರು : ಪೌತಿ ಖಾತೆ ಮಾಡಿಕೊಡಲು ₹5 ಸಾವಿರ ಲಂಚ ಪಡೆಯುತ್ತಿದ್ದ ತಾಲ್ಲೂಕಿನ ಕೊಪ್ಪ ಹೋಬಳಿಯ ಬೆಕ್ಕಳಲೆ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಓ ಸಚಿನ್‌ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದರು. ತಾಲ್ಲೂಕಿನ ತಗ್ಗಹಳ್ಳಿಯಲ್ಲಿ ಅವರು ಪಿಡಿಒ ಆಗಿದ್ದಾರೆ. 

ಗ್ರಾಮದ ಶಿವಲಿಂಗಯ್ಯ ದೂರು ನೀಡಿದ್ದರು. ಲೋಕಾಯುಕ್ತ ಇನ್‌ಸ್ಪೆಕ್ಟರ್‌ಗಳಾದ ಬ್ಯಾಟರಾಯಗೌಡ, ಕುಮಾರ್‌ ಕಾರ್ಯಾಚರಣೆ ನಡೆಸಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.