ADVERTISEMENT

ಪೆಟ್ರೋಲ್‌ಗಾಗಿ ಮುಗಿಬಿದ್ದ ದ್ವಿಚಕ್ರ ವಾಹನ ಸವಾರರು

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2020, 12:52 IST
Last Updated 30 ಮಾರ್ಚ್ 2020, 12:52 IST
ಕೆರಗೋಡು ಸಮೀಪದ ಮರಿಲಿಂಗನದೊಡ್ಡಿ ಗ್ರಾಮದಲ್ಲಿರುವ ಏ. 14 ರವರೆಗೆ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ಹಾಕದಂತೆ ಜಿಲ್ಲಾಧಿಕಾರಿ ಆದೇಶಿಸಿದ ಹಿನ್ನೆಲೆಯಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳಲು ಮುಗಿಬಿದ್ದ ದ್ವಿಚಕ್ರ ವಾಹನ ಸವಾರರು
ಕೆರಗೋಡು ಸಮೀಪದ ಮರಿಲಿಂಗನದೊಡ್ಡಿ ಗ್ರಾಮದಲ್ಲಿರುವ ಏ. 14 ರವರೆಗೆ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ಹಾಕದಂತೆ ಜಿಲ್ಲಾಧಿಕಾರಿ ಆದೇಶಿಸಿದ ಹಿನ್ನೆಲೆಯಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳಲು ಮುಗಿಬಿದ್ದ ದ್ವಿಚಕ್ರ ವಾಹನ ಸವಾರರು   

ಕೆರಗೋಡು: ಜಿಲ್ಲೆಯಾದ್ಯಂತ ಏ. 14ರವರೆಗೆ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ನಿಷೇಧಿಸಿ ಜಿಲ್ಲಾಧಿಕಾರಿಗಳು ಹೊರಡಿಸಿದ ಆದೇಶದ ಹಿನ್ನೆಲೆಯಲ್ಲಿ ಬಂಕ್‌ ಮುಂದೆ ಪೆಟ್ರೋಲ್‌ ಹಾಕಿಸಲು ದ್ವಚಿಕ್ರ ವಾಹನ ಸವಾರರು ಸಾಲುಗಟ್ಟಿ ನಿಂತಿದ್ದರು.

ಪೆಟ್ರೋಲ್ ಹಾಕಿಸಿಕೊಳ್ಳುವ ಆತುರದಲ್ಲಿ ಸಾರ್ವಜನಿಕರು ಎಲ್ಲವನ್ನೂ ಮರೆತರು. ಸಾಮಾಜಿಕ ಅಂತರ ಕಾಯ್ದುಕೊಂಡು ಹಾಕಿಸಿಕೊಳ್ಳಲಿಲ್ಲ. ಹಲವರು ಮೊಬೈಲ್ ಮೂಲಕ ಸ್ನೇಹಿತರು, ಸಂಬಂಧಿಕರನ್ನು ಕರೆಸಿಕೊಳ್ಳುತ್ತಿದ್ದರು. ಕೆಲವರು ವಾಟರ್ ಬಾಟಲ್‌ಗಳಲ್ಲಿ ಪೆಟ್ರೋಲ್‌ ಹಾಕಿಸಿಕೊಂಡು ಹೋದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT