ಮಂಡ್ಯ: ಗುತ್ತಲು ಅರಕೇಶ್ವರಸ್ವಾಮಿ ದೇವಾಲಯದ ಮೂವರು ಅರ್ಚಕರ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ನೇತೃತ್ವದಲ್ಲಿ ಐದು ತಂಡ ರಚನೆ ಮಾಡಲಾಗಿದೆ. ಕೊಲೆ ನಡೆದ ಸ್ಥಳದಲ್ಲಿ ಸಿಕ್ಕ ಪ್ರಮುಖ ಸಾಕ್ಷ್ಯವೊಂದರ ಬೆನ್ನು ಹತ್ತಿದ್ದ ಪೊಲೀಸರು ಐವರು ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಆರೋಪಿಗಳು ಮದ್ದೂರು, ಚನ್ನಪಟ್ಟಣ ಹಾಗೂ ತುಮಕೂರು ಮೂಲದವರು. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ.
‘ಕೇವಲ ಹುಂಡಿ ಹಣದ ಉದ್ದೇಶಕ್ಕಾಗಿ ಅರ್ಚಕರನ್ನು ಹತ್ಯೆ ಮಾಡಲಾಗಿದೆ ಎಂದು ತನಿಖೆಯಿಂದ ಗೊತ್ತಾಗಿದೆ. ತನಿಖೆ ಪೂರ್ಣಗೊಂಡ ನಂತರವಷ್ಟೇ ಮಾಹಿತಿ ನೀಡಲಾಗುವುದು’ ಎಂದು ಎಸ್.ಪಿ ಕೆ.ಪರಶುರಾಮ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.