ಮಂಡ್ಯ: ಈ ಬಾರಿ ಮುಂಗಾರು ಪೂರ್ವ ಮತ್ತು ಮುಂಗಾರು ಮಳೆ–ಗಾಳಿಯಿಂದ ವಿದ್ಯುತ್ ಜಾಲಕ್ಕೆ ತೀವ್ರ ಹಾನಿಯಾಗಿದ್ದು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಕ್ಕೆ (ಸೆಸ್ಕ್) ಭಾರಿ ನಷ್ಟವಾಗಿದೆ.
ವಿದ್ಯುತ್ ಪೂರೈಕೆಯಲ್ಲಿ ಹೆಚ್ಚು ವ್ಯತ್ಯಯವಾಗಬಾರದೆಂದು ಸೆಸ್ಕ್ ದುರಸ್ತಿ ಕಾರ್ಯವನ್ನು ಸಮರೋಪಾದಿಯಲ್ಲಿ ನಡೆಸಿದೆ. ‘ಈಗಾಗಲೇ 5,487 ಕಂಬಗಳನ್ನು ಬದಲಿಸಿದ್ದು, 114 ಕಂಬಗಳನ್ನು ಬದಲಿಸಬೇಕಾಗಿದೆ. ಎಲ್ಲ ಪರಿವರ್ತಕಗಳನ್ನು ಬದಲಿಸಲಾಗಿದೆ. ತಂತಿ ದುರಸ್ತಿಯೂ ಬಹುತೇಕ ಪೂರ್ಣಗೊಂಡಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿ ವರ್ಷ ಮಳೆ–ಗಾಳಿ ಮತ್ತು ನೈಸರ್ಗಿಕ ವಿಕೋಪದಿಂದ ಹಾನಿಯಾಗುವ ವಿದ್ಯುತ್ ಜಾಲವನ್ನು ಸರಿಪಡಿಸುವ ವೆಚ್ಚವನ್ನು ಭರಿಸುವುದು ಕಷ್ಟಸಾಧ್ಯವಾಗಿದೆ. ಹೀಗಾಗಿ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ಅಡಿ ಅನುದಾನ ಬಿಡುಗಡೆ ಮಾಡಬೇಕು ಎಂದು ಆಯಾ ಜಿಲ್ಲಾಧಿಕಾರಿಗಳಿಗೆ ಸೆಸ್ಕ್ ಪ್ರಧಾನ ವ್ಯವಸ್ಥಾಪಕರು ಪತ್ರ ಬರೆದಿದ್ದಾರೆ.
ನಷ್ಟದ ಅಂಕಿ ಅಂಶ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.