ADVERTISEMENT

ರಾಜ್‌ಕುಮಾರ್‌ಗೆ ಭಾರತರತ್ನ ನೀಡಲಿ

ಮಳವಳ್ಳಿಯಲ್ಲಿ ಡಾ.ರಾಜ್‌ ಕಲಾ ಸಂಘದ ಅಧ್ಯಕ್ಷ ದೊಡ್ಡಯ್ಯ ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2019, 20:25 IST
Last Updated 24 ಏಪ್ರಿಲ್ 2019, 20:25 IST
ಮಳವಳ್ಳಿಯ ಗಂಗಾಮತ ಬಡಾವಣೆಯಲ್ಲಿ ಡಾ.ರಾಜ್‌ಕುಮಾರ್ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು
ಮಳವಳ್ಳಿಯ ಗಂಗಾಮತ ಬಡಾವಣೆಯಲ್ಲಿ ಡಾ.ರಾಜ್‌ಕುಮಾರ್ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು   

ಮಳವಳ್ಳಿ: ಪಟ್ಟಣದ ಗಂಗಾಮತ ಬಡಾವಣೆಯಲ್ಲಿ ಡಾ.ರಾಜ್‌ ಕಲಾ ಸಂಘದ ವತಿಯಿಂದ ವರನಟ ಡಾ.ರಾಜ್‌ ಕುಮಾರ್ ಅವರ ಹುಟ್ಟುಹಬ್ಬವನ್ನು ಬುಧವಾರ ಆಚರಿಸಲಾಯಿತು.

ಸಂಘದ ಅಧ್ಯಕ್ಷ ದೊಡ್ಡಯ್ಯ ಮಾತನಾಡಿ, ‘ರಾಜ್‌ಕುಮಾರ್ ಅವರು ರಂಗಭೂಮಿಯಿಂದ ಚಿತ್ರರಂಗಕ್ಕೆ ಬಂದು ಮೇರುನಟರಾಗಿ ಬೆಳೆದು ಕನ್ನಡ ಭಾಷೆ, ಸಂಸ್ಕೃತಿಗೆ ಕೊಡುಗೆ ನೀಡಿದ್ದಾರೆ. ಅವರ ಚಲನಚಿತ್ರಗಳು ಸಮಾಜಕ್ಕೆ ಮಾದರಿಯಾಗಿವೆ. ಇಂದಿನ ಯುವ ಪೀಳಿಗೆ ಅವರ ಚಿತ್ರಗಳನ್ನು ನೋಡಬೇಕಿದೆ’ ಎಂದರು.

ಪ್ರಪಂಚದ ಪ್ರಬುದ್ಧ ನಟರ ಸಾಲಿನಲ್ಲಿ ರಾಜ್‌ಕುಮಾರ್ ನಿಲ್ಲುತ್ತಾರೆ. ರಂಗಭೂಮಿ, ಸಿನಿಮಾ, ಗಾಯನ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸೈ ಎನಿಸಿಕೊಂಡ ಮೇರು ವ್ಯಕ್ತಿ ಅವರು. ಅವರಿಗೆ ‘ಭಾರತರತ್ನ’ ಪುರಸ್ಕಾರ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ಕಾರ್ಯಕ್ರಮದಲ್ಲಿ ಯಜಮಾನ್ ವಸಂತ, ಗೋವಿಂದರಾಜು, ಷರೀಫ್‌, ನಾಗರಾಜು, ತುಕಾರಾಂ, ಶಿವಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.