ADVERTISEMENT

ಆತ್ಮನಿರ್ಭರ ಭಾರತ ‌ ಅಡಿ ಆಲೆಮನೆಗಳ ಪುನಶ್ಚೇತನ: ಎಸ್‌.ಟಿ.ಸೋಮಶೇಖರ್‌

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 11:55 IST
Last Updated 19 ಸೆಪ್ಟೆಂಬರ್ 2020, 11:55 IST
   

ಮಂಡ್ಯ: ‘ಕೇಂದ್ರ ಸರ್ಕಾರದ ಆತ್ಮನಿರ್ಭರ ಭಾರತ ಯೋಜನೆಯಡಿ ಮಂಡ್ಯ ಭಾಗದ ಆಲಮನೆಗಳಿಗೆ ಪುನಶ್ಚೇತನ ನೀಡಲಾಗುವುದು’ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಶನಿವಾರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸಹಕಾರ ಇಲಾಖೆ ವತಿಯಿಂದ ಆಲೆಮನೆ ಮಾಲೀಕರಿಗೆ ಸಾಲಸೌಲಭ್ಯ ಒದಗಿಸಲಾಗುವುದು. ಸಾವಯವ ಬೆಲ್ಲ ತಯಾರಿಗೆ ಎಲ್ಲಾ ರೀತಿಯ ಉತ್ತೇಜನ ನೀಡಲಾಗುವುದು. ಆಲೆಮನೆಯಲ್ಲಿ ಬೆಲ್ಲ ತಯಾರಿಸುವ ಕೌಶಲಕ್ಕೆ ಅಂತರರಾಷ್ಟ್ರೀಯ ಮಾರುಕಟ್ಟೆ ಒದಗಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ’ ಎಂದರು.

‘ಆಲೆಮನೆ ಮಾಲೀಕರು ಆಧುನಿಕ ಯಂತ್ರೋಪಕರಣ ಅಳವಡಿಸಿಕೊಳ್ಳಲು ಸರ್ಕಾರದ ವತಿಯಿಂದ ಸಹಾಯ ಒದಗಿಸಲಾಗುವುದು. ಆ ಮೂಲಕ ಕಬ್ಬು ಕ್ರಷರ್‌ಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಈ ಕುರಿತು ಆಲೆಮನೆ ಮಾಲೀಕರೊಂದಿಗೆ ಸಭೆ ನಡೆಸಲಾಗುವುದು. ಅ.2ರೊಳಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.