ADVERTISEMENT

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರ ದುರ್ಮರಣ

​ಪ್ರಜಾವಾಣಿ ವಾರ್ತೆ
Published 24 ಮೇ 2019, 11:25 IST
Last Updated 24 ಮೇ 2019, 11:25 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮದ್ದೂರು: ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ, ಪಟ್ಟಣದ ಶಿವಪುರದಲ್ಲಿ ಗುರುವಾರ ರಾತ್ರಿ ರಸ್ತೆ ಬದಿ ನಿಂತಿದ್ದ ಲಾರಿಗೆ ಮಾರುತಿ ಬೊಲೆರೊ ಕಾರು ಡಿಕ್ಕಿ ಹೊಡೆದು ಕಾರ್‌ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.‌

ಕೇರಳದ ಕಣ್ಣೂರಿನ ನಿವಾಸಿಗಳಾದ ಜಯದೀಪ್ (29), ಅವರ ಪತ್ನಿ ಗಾಯತ್ರಿ (26), ಕಿರಣ್ (30), ಅವರ ಪತ್ನಿ ಜಿನ್ಸಿ (27) ಮೃತಪಟ್ಟವರು.ರಾತ್ರಿ 11.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ.

ಹೊಸದಾಗಿ ವಿವಾಹವಾಗಿದ್ದ ಎರಡು ದಂಪತಿ ಪ್ರವಾಸಕ್ಕೆ ಬಂದಿದ್ದರು. ಬೆಂಗಳೂರಿನಿಂದ ಮೈಸೂರಿಗೆ ತೆರಳುವಾಗ ಘಟನೆ ನಡೆದಿದೆ. ಮದ್ದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.