ಸಂತೇಬಾಚಹಳ್ಳಿ: ಹೋಬಳಿ ವ್ಯಾಪ್ತಿಯ ವಿವಿಧ ಮತಗಟ್ಟೆಯಲ್ಲಿ ಶಾಂತಿಯುತ ಮತದಾನ ನಡೆಯಿತು. ಬೆಳಿಗ್ಗೆ ಮತ ಚಲಾವಣೆಯಲ್ಲಿ ಜನರು ಆಸಕ್ತಿ ತೋರದಿದ್ದರೂ ಸಂಜೆಯ ವೇಳೆಗೆ ಬಿರುಸಿನಿಂದ ಹಕ್ಕು ಚಲಾವಣೆ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದರು. ಅಪ್ಪನಹಳ್ಳಿ ಗ್ರಾಮದ ಶತಾಯುಷಿ ಸಣ್ಣಮ್ಮ (107) ತಮ್ಮ ಮೊಮ್ಮಕ್ಕಳ ಸಹಾಯದಿಂದ ಅಪ್ಪನಹಳ್ಳಿ ಗ್ರಾಮದ ಮತಗಟ್ಟೆ ಸಂಖ್ಯೆ 33ರಲ್ಲಿ ಮತದಾನ ಮಾಡಿದರು.
ಬೆಂಗಳೂರು ಮತ್ತು ಮುಂಬೈನಿಂದ ಸಂತೇಬಾಚಹಳ್ಳಿ ಗ್ರಾಮಕ್ಕೆ ಮತದಾರರು ಖಾಸಗಿ ಬಸ್ನಲ್ಲಿ ಬಂದು ಮತ ಚಲಾವಣೆ ಮಾಡಿದರು. ಮಾರೇನಹಳ್ಳಿ ಮತಗಟ್ಟೆಯಲ್ಲಿ ಜಿ.ಪಂ. ಸದಸ್ಯೆ ಜೆ.ಪ್ರೇಮಕುಮಾರಿ, ಮಾಜಿ ಜಿ.ಪಂ. ಸದಸ್ಯರಾದ ವಿ.ಮಂಜೇಗೌಡ, ಅಘಲಯ ಮಂಜುನಾಥ್, ಜೆ.ಡಿ.ಎಸ್. ತಾಲ್ಲೂಕು ಅಧ್ಯಕ್ಷ ಜಾನಕೀರಾಂ ಅಘಲಯದಲ್ಲಿ ಮತದಾನ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.