ADVERTISEMENT

ರೆಸಾರ್ಟ್‌ನಲ್ಲಿ ಧಾರಾವಾಹಿ ಚಿತ್ರೀಕರಣ: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 2 ಮೇ 2021, 6:41 IST
Last Updated 2 ಮೇ 2021, 6:41 IST
ಶ್ರೀರಂಗಪಟ್ಟಣ ಸಮೀಪ ಖಾಸಗಿ ರೆಸಾರ್ಟ್‌ನಲ್ಲಿ ಧಾರಾವಾಹಿ ಚಿತ್ರೀಕರಣ ನಡೆಯುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ನಗುವನಹಳ್ಳಿ ಗ್ರಾ.ಪಂ. ಪಿಡಿಒ, ಜನಪ್ರತಿನಿಧಿಗಳು ಹಾಗೂ ಪೊಲೀಸರು ಭೇಟಿ ನೀಡಿದ್ದರು
ಶ್ರೀರಂಗಪಟ್ಟಣ ಸಮೀಪ ಖಾಸಗಿ ರೆಸಾರ್ಟ್‌ನಲ್ಲಿ ಧಾರಾವಾಹಿ ಚಿತ್ರೀಕರಣ ನಡೆಯುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ನಗುವನಹಳ್ಳಿ ಗ್ರಾ.ಪಂ. ಪಿಡಿಒ, ಜನಪ್ರತಿನಿಧಿಗಳು ಹಾಗೂ ಪೊಲೀಸರು ಭೇಟಿ ನೀಡಿದ್ದರು   

ಶ್ರೀರಂಗಪಟ್ಟಣ: ಇಲ್ಲಿಗೆ ಸಮೀಪದ ರೆಸಾರ್ಟ್‌ವೊಂದರಲ್ಲಿ, ಕೋವಿಡ್‌ ನಿಯಮ ಉಲ್ಲಂಘಿಸಿ ಚಿತ್ರೀಕರಣ ನಡೆಸುತ್ತಿದ್ದ ಧಾರಾವಾಹಿಯೊಂದರ ತಂಡದ ಮೇಲೆ ಶುಕ್ರವಾರ ರಾತ್ರಿ ಪೊಲೀಸರು ದಾಳಿ ಮಾಡಿ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರಿನ ಕಲಾವಿದರು ಹಾಗೂ ತಂತ್ರಜ್ಞರು ಧಾರಾವಾಹಿ ಚಿತ್ರೀಕರಣ ನಡೆಸುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ, ಪೊಲೀಸರು ಹಾಗೂ ಅಧಿಕಾರಿಗಳು ದಾಳಿ ನಡೆಸಿದರು. ನಿಯಮ ಉಲ್ಲಂಘಿಸಿ, ಚಿತ್ರೀಕರಣ ನಡೆಸಲು ಅವಕಾಶ ನೀಡಿದ್ದಕ್ಕೆ ರೆಸಾರ್ಟ್‌ ವ್ಯವಸ್ಥಾಪಕರನ್ನು ತರಾಟೆ ತೆಗೆದುಕೊಂಡರು.

ತಹಶೀಲ್ದಾರ್ ಎಂ.ವಿ. ರೂಪಾ ಸೂಚನೆ ಮೇರೆಗೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಧಾರಾವಾಹಿ ಚಿತ್ರೀಕರಣ ನಡೆಸುತ್ತಿದ್ದ ತಂಡದ ಮುಖ್ಯಸ್ಥರಿಗೆ ದಂಡವನ್ನೂ ವಿಧಿಸಲಾಗಿದೆ’ ಎಂದು ತಹಶೀಲ್ದಾರ್‌ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.