
ಪ್ರಜಾವಾಣಿ ವಾರ್ತೆ
ಮಳವಳ್ಳಿ: ತಾಲ್ಲೂಕಿನ ಚನ್ನಪಳ್ಳೆಕೊಪ್ಪಲು ಗ್ರಾಮದಲ್ಲಿ ಸೋಮವಾರ ವಿಷ ಪ್ರಾಶನದಿಂದ 16 ಕುರಿಗಳು ಸಾವನ್ನಪ್ಪಿದ್ದು, ಕಿಡಿಗೇಡಿಗಳ ಕೃತ್ಯದ ಶಂಕೆ ವ್ಯಕ್ತವಾಗಿದೆ.
ಗ್ರಾಮದ ಸಿದ್ದಯ್ಯನವರ ಮಗ ರೈತ ಕರಿಯಪ್ಪ ಎಂಬವರ 15 ಕುರಿ ಹಾಗೂ ಒಂದು ಟಗರು ಸಾವನ್ನಪ್ಪಿವೆ. ಕಿಡಿಗೇಡಿಗಳು ಕರಿಯಪ್ಪ ಅವರ ಮನೆಯ ಹಿತ್ತಲಿನಲ್ಲಿ ಇರಿಸಿದ್ದ ಕುಡಿಯುವ ನೀರಿನ ಬಕೆಟ್ಗೆ ವಿಷ ಹಾಕಿದ್ದರಿಂದ ದುರ್ಘಟನೆ ನಡೆದಿದೆ. ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಿ ಬಂಧಿಸಬೇಕು. ಕುರಿಗಳ ಸಾವಿಗೆ ಪರಿಹಾರ ನೀಡಬೇಕು ಎಂದು ರೈತ ಕುಟುಂಬ ಜಿಲ್ಲಾಡಳಿತವನ್ನು ಆಗ್ರಹಿಸಿದೆ.