ADVERTISEMENT

ಯಡಿಯೂರಪ್ಪ ಸಿ.ಎಂ ಆಗಲಿ: ಹುಟ್ಟೂರಲ್ಲಿ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2019, 13:35 IST
Last Updated 16 ಜುಲೈ 2019, 13:35 IST
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆಯಲ್ಲಿ ಗ್ರಾಮದ ಮಗ ಬಿ.ಎಸ್.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂದು ಪ್ರಾರ್ಥಿಸಿ ಅವರ ಅಭಿಮಾನಿಗಳು, ಬಿಜೆಪಿ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆಯಲ್ಲಿ ಗ್ರಾಮದ ಮಗ ಬಿ.ಎಸ್.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂದು ಪ್ರಾರ್ಥಿಸಿ ಅವರ ಅಭಿಮಾನಿಗಳು, ಬಿಜೆಪಿ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು   

ಕೆ.ಆರ್.ಪೇಟೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂದು ಪ್ರಾರ್ಥಿಸಿ ಅವರ ಹುಟ್ಟೂರು ಬೂಕನಕೆರೆ ಗ್ರಾಮದಲ್ಲಿ ಮಂಗಳವಾರ ಅಭಿಮಾನಿಗಳು, ಬಿಜೆಪಿ ಮುಖಂಡರು ಗ್ರಾಮದೇವತೆ ಗೋಗಲ್ಲಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಸೋಮವಾರ ರಾತ್ರಿಯಿಂದಲೇ ಗ್ರಾಮದ ಹಲವು ದೇವಾಲಯಗಳನ್ನು ಸ್ವಚ್ಛಗೊಳಿಸಿ ತಳಿರು, ತೋರಣಗಳಿಂದ ಅಲಂಕಾರ ಮಾಡಲಾಗಿತ್ತು. ಮಂಗಳವಾರ ನಸುಕಿನಿಂದಲೇ ಗಣಹೋಮ, ಅಭಿಷೇಕ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಯಡಿಯೂರಪ್ಪ ಅವರ ಮನೆ ದೇವರಾದ ಕಾಪನಹಳ್ಳಿ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ಸನ್ನಧಿಯಲ್ಲಿಯೂ ವಿಶೇಷ ಪೂಜೆ ನೆರವೇರಿಸಲಾಯಿತು.

ಯಡಿಯೂರಪ್ಪ ಅವರು ಆಗಾಗ ಹುಟ್ಟೂರಿಗೆ ಬಂದು ಗೋಗಲಮ್ಮನಿಗೆ ಪೂಜೆ ಸಲ್ಲಿಸುತ್ತಾರೆ. ಸಮ್ಮಿಶ್ರ ಸರ್ಕಾರ ಪತನವಾಗಲಿದ್ದು ಬೂಕನಕರೆಯ ಪುತ್ರ ಮುಖ್ಯಮಂತ್ರಿಯಾಗಬೇಕು ಎಂದು ಅಭಿಮಾನಿಗಳು ಪ್ರಾರ್ಥಿಸಿದರು.

ADVERTISEMENT

ಪೂಜಾ ಕೈಂಕರ್ಯದಲ್ಲಿ ಯಡಿಯೂರಪ್ಪ ಸಹೋದರಿ ಪ್ರೇಮಮ್ಮ, ಅವರ ಮಗ ಅಶೋಕ್ ಹಾಗೂ ಸೊಸೆ ಸಂಧ್ಯಾರಾಣಿ , ಬಿಜೆಪಿ ಪಕ್ಷದ ಮುಖಂಡರಾದ ಕೆ.ಎಸ್.ನಂಜುಂಡೇಗೌಡ , ಬೂಕನಕೆರೆ ಮಧುಸೂದನ್, ಮೀನಾಕ್ಷಮ್ಮ, ಪುಟ್ಟರಾಜು, ತೋಟಪ್ಪ ಇದ್ದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.