ಹಲಗೂರು: ಸಮೀಪದ ತೊರೆಕಾಡನಹಳ್ಳಿ ಗ್ರಾಮದ ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಬುಧವಾರ ಮೃತಪಟ್ಟಿದ್ದಾರೆ.
ಗೊಲ್ಲರಹಳ್ಳಿ ಗ್ರಾಮದ ಮಹದೇವ ಅವರ ಮಗ ಯಶವಂತ್ (15), ನಂಜೇಗೌಡ ಅವರ ಮಗ ಸಂತೋಷ್ (14) ಮೃತಪಟ್ಟ ವಿದ್ಯಾರ್ಥಿಗಳು.
ಶಾಲೆಗೆ ರಜೆ ಇದ್ದಿದ್ದರಿಂದ ಇಬ್ಬರೂ ಸೈಕಲ್ನಲ್ಲಿ ಗೊಲ್ಲರಹಳ್ಳಿಯಿಂದ ತೊರೆಕಾಡನಹಳ್ಳಿ ಗ್ರಾಮದ ಪ್ರಕಾಶ್ ಅವರ ಬಾವಿಯಲ್ಲಿ ಈಜಲು ಹೋಗಿದ್ದಾಗ ಈ ಅವಘಡ ಸಂಭವಿಸಿದೆ.
ಯಶವಂತ್ ಹಲಗೂರಿನಲ್ಲಿ 9ನೇ ತರಗತಿ, ಸಂತೋಷ್ 8ನೇ ತರಗತಿಯಲ್ಲಿ ಓದುತ್ತಿದ್ದರು. ಸ್ಥಳಕ್ಕೆ ಸಿಪಿಐ ಮಂಜುನಾಥ್, ಸಬ್ ಇನ್ಸ್ಪೆಕ್ಟರ್ ಚೌಡೇಗೌಡ ಭೇಟಿ ನೀಡಿ ಪರಿಶೀಲಿಸಿದರು.
ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.