ADVERTISEMENT

‘ಸುಮಲತಾ ದೇವಾಲಯದಲ್ಲಿ ಪ್ರಮಾಣ ಮಾಡಲಿ’

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2019, 19:13 IST
Last Updated 16 ಏಪ್ರಿಲ್ 2019, 19:13 IST

ಮಂಡ್ಯ: 'ಅಂಬರೀಷ್ ಮೃತದೇಹ ಮಂಡ್ಯಕ್ಕೆ ಕೊಂಡೊಯ್ದ ವಿಚಾರದಲ್ಲಿ ನಾನು ಸತ್ಯ ಹೇಳಿದ್ದೇನೆ. ಅದು ಸತ್ಯವೋ, ಅಲ್ಲವೋ ಎಂಬ ಬಗ್ಗೆ ಪಕ್ಷೇತರ ಅಭ್ಯರ್ಥಿ ಯಾವುದೇ ದೇವಾಲಯದಲ್ಲಿ ಪ್ರಮಾಣ ಮಾಡಲಿ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು 'ಕೊನೆಯ ದಿನ ಪಕ್ಷೇತರ ಅಭ್ಯರ್ಥಿ ಕೀಳು ಅಭಿರುಚಿಯ ಭಾಷಣ ಮಾಡಿದ್ದಾರೆ. ಅವರಂತಹ ಕೀಳು ಅಭಿರುಚಿಯ ಜನರನ್ನು ನಾನು ಜೀವನದಲ್ಲೇ ಕಂಡಿಲ್ಲ. ಅವರ ಎಲ್ಲಾ ಮಾತುಗಳಿಗೆ ನಾನು ಉತ್ತರ ಕೊಡುವ ಅಗತ್ಯವಿಲ್ಲ. ಜನರೇ ಉತ್ತರ ಕೊಡುತ್ತಾರೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT