ADVERTISEMENT

ಸುಮನ್‌ ಡಿ ಪನ್ನೇಕರ್‌ ಮಂಡ್ಯ ನೂತನ ಎಸ್ಪಿ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2021, 16:14 IST
Last Updated 20 ಅಕ್ಟೋಬರ್ 2021, 16:14 IST
ಸುಮನ್‌ ಡಿ ಪನ್ನೇಕರ್‌
ಸುಮನ್‌ ಡಿ ಪನ್ನೇಕರ್‌   

ಮಂಡ್ಯ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದ ಡಾ.ಎಂ.ಅಶ್ವಿನಿ ಅವರನ್ನು ವರ್ಗಾವಣೆ ಮಾಡಿದ್ದು ಅವರ ಜಾಗಕ್ಕೆ ಐಪಿಎಸ್‌ ಅಧಿಕಾರಿ ಸುಮನ್‌ ಡಿ ಪನ್ನೇಕರ್‌ ಅವರನ್ನು ನೇಮಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಮೈಸೂರಿನ ಕರ್ನಾಟಕ ಪೊಲೀಸ್‌ ಅಕಾಡೆಮಿಯ ಉಪ ನಿರ್ದೇಶಕಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಸುಮನ್‌ ಡಿ ಪನ್ನೇಕರ್‌ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂ.ಅಶ್ವಿನಿ ಅವರನ್ನು ಸಹಾಯಕ ಐಜಿಪಿಯಾಗಿ ಬೆಂಗಳೂರು ಮುಖ್ಯ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT