ADVERTISEMENT

ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲು

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2021, 18:29 IST
Last Updated 24 ಆಗಸ್ಟ್ 2021, 18:29 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕೆ.ಆರ್.ಪೇಟೆ: ತಾಲ್ಲೂಕಿನ ನಾಟನಹಳ್ಳಿ ಗ್ರಾಮದ ಬಳಿ ಹೇಮಾವತಿ ಮಂದಗೆರೆ ಎಡದಂಡೆ ನಾಲೆಯಲ್ಲಿ ಮಂಗಳವಾರ ಸಂಜೆ ಈಜಲು ತೆರಳಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮೈಸೂರಿನ ಕುಂಬಾರಕೊಪ್ಪಲಿನ ಮಂಜು(20), ಲೋಕನಾಯಕ ನಗರದ ರವಿ(22), ಆಟೊ ಚಾಲಕ ಮೊಗರಹಳ್ಳಿ ಮಂಟಿಯ ನಿವಾಸಿ ರವಿ (27) ಮೃತಪಟ್ಟವರು.

ತಾಲ್ಲೂಕಿನ ಬಂಡಿಹೊಳೆ ಗ್ರಾಮದ ಸಮೀಪದಲ್ಲಿರುವ ಶಕ್ತಿದೇವತೆ ಚಂದಗೋಳಮ್ಮ ಕ್ಷೇತ್ರಕ್ಕೆ 8 ಮಂದಿ ಯುವಕರು ಬಂದಿದ್ದರು. ಮಂದಗೆರೆ ಎಡದಂಡೆ ನಾಲೆಯಲ್ಲಿ ಎಲ್ಲರೂ ಈಜಲು ತೆರಳಿದ್ದರು. ಐವರು ಮಾತ್ರ ಮೇಲೆ ಬಂದಿದ್ದು ಮೂವರು ಮುಳುಗಿ ಮೃತಪಟ್ಟಿದ್ದಾರೆ.

ADVERTISEMENT

ಶವಗಳ ಪತ್ತೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿವರೆಗೂ ಶೋಧ ಕಾರ್ಯಾಚರಣೆ ನಡೆಸಿದರು. ಆದರೆ ಮೃತದೇಹಗಳು ಪತ್ತೆಯಾಗಿಲ್ಲ. ಬುಧವಾರ ಬೆಳಿಗ್ಗೆ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆ.ಆರ್‌.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.