ADVERTISEMENT

ನೀರಿನಲ್ಲಿ ಮುಳುಗಿ ಶ್ರೀರಂಗಪಟ್ಟಣದಲ್ಲಿ ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 22 ಮೇ 2023, 3:59 IST
Last Updated 22 ಮೇ 2023, 3:59 IST
   

ಶ್ರೀರಂಗಪಟ್ಟಣ: ಬಂಧುಗಳ ಮದುವೆಗೆ ಬಂದಿದ್ದ ಇಬ್ಬರು ಯುವಕರು ಈಜಲು ನದಿಗೆ ಇಳಿದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳಗೊಳ ಬಳಿಯ ಬಲಮುರಿ ಪ್ರಕೃತಿ ತಾಣದಲ್ಲಿ ಭಾನುವಾರ ಸಂಜೆ ನಡೆದಿದೆ.

ಹೊಳೆನರಸೀಪುರದ ಹೌಸಿಂಗ್‌ ಬೋರ್ಡ್‌ ಕಾಲೊನಿಯ ದರ್ಶನ್‌ (19) ಮತ್ತು ಧನಂಜಯ (19) ಮೃತರು.

ಮದುವೆ ಮುಗಿದ ಬಳಿಕ ಈಜಲು ನದಿಗೆ ಇಳಿದಾಗ ಸುಳಿಗೆ ಸಿಕ್ಕಿ ಮುಳುಗಿದ್ದಾರೆ. ತಕ್ಷಣಕ್ಕೆ ಅವರನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ADVERTISEMENT

ಸಂಜೆ ವೇಳೆಗೆ ಈಜುಗಾರರ ಸಹಾಯದಿಂದ ಶವಗಳನ್ನು ನದಿಯಿಂದ ಮೇಲೆ ತೆಗೆದು ಮೈಸೂರಿನ ಕೆ.ಆರ್‌. ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಯಿತು. ಕೆಆರ್‌ಎಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.