ADVERTISEMENT

ಮೈಸೂರು- ಹಾಸನ ಹೆದ್ದಾರಿಯಲ್ಲಿ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 19 ಜೂನ್ 2023, 5:04 IST
Last Updated 19 ಜೂನ್ 2023, 5:04 IST
ಭರತ್ ಮತ್ತು ಸಂದೇಶ್
ಭರತ್ ಮತ್ತು ಸಂದೇಶ್   

ಮಂಡ್ಯ: ಅಪರಿಚಿತ ವಾಹನ ಡಿಕ್ಕಿ ಹೊಡೆದ‌ ಪರಿಣಾಮ ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಹಿರೀಕಳಲೆ ಗ್ರಾಮದ ಬಳಿ ಮೈಸೂರು- ಹಾಸನ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಹಿರೀಕಳಲೆ ಗ್ರಾಮದ ಸಂದೇಶ್ (25), ಮರಡಹಳ್ಳಿಯ ಭರತ್ (23) ಮೃತಪಟ್ಟವರು.

ಎಳನೀರು ವ್ಯಾಪಾರ ಮಾಡುತ್ತಿದ್ದ ಯುವಕರು ಭಾನುವಾರ ರಾತ್ರಿ 10 ಗಂಟೆ ಸಮಯದಲ್ಲಿ ಕೆ.ಆರ್.ಪೇಟೆಯಿಂದ ಕಿಕ್ಕೇರಿ ಕಡೆ ಬರುವಾಗ ಘಟನೆ ನಡೆದಿದೆ.

ADVERTISEMENT

ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿರುವ ಸಾಧ್ಯತೆ ಇದೆ, ವಾಹನ ಪತ್ತೆಗೆ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಲಾಗುತ್ತಿದೆ ಎಂದು‌ ಪೊಲೀಸರು ತಿಳಿಸಿದ್ದಾರೆ. ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.