ADVERTISEMENT

ವಿಧಾನ ಪರಿಷತ್‌ ಚುನಾವಣೆ| ಮಂಡ್ಯದಲ್ಲಿ ಸುಮಲತಾ ಬೆಂಬಲದ್ದೇ ಮಾತು

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2021, 4:28 IST
Last Updated 27 ನವೆಂಬರ್ 2021, 4:28 IST
ಮಂಡ್ಯ ಸಂಸದೆ ಸುಮಲತಾ
ಮಂಡ್ಯ ಸಂಸದೆ ಸುಮಲತಾ    

ಮಂಡ್ಯ: ವಿಧಾನಪರಿಷತ್‌ಚುನಾವಣೆಯಲ್ಲಿ ಸಂಸದೆ ಸುಮಲತಾ ಅವರ ಬೆಂಬಲ ಯಾರಿಗೆ ಎಂಬ ಚರ್ಚೆ ಜಿಲ್ಲೆಯಾದ್ಯಂತ ಗರಿಗೆದರಿದೆ. ‘ಯಾರಿಗೂ ಬೆಂಬಲ ನೀಡುವುದಿಲ್ಲ, ಯಾರಿಗೂ ಬೆಂಬಲ ನೀಡದೆಯೂ ಇರುವುದಿಲ್ಲ’ ಎಂದು ಸುಮಲತಾ ಹೇಳಿರುವುದು ಗೊಂದಲಕ್ಕೆ ಕಾರಣವಾಗಿದೆ.

‘ಸುಮಲತಾ ಬೆಂಬಲ ಬಿಜೆಪಿಗೆ ದೊರೆಯಲಿದೆ. ಲೋಕಸಭಾ ಚುನಾವಣೆ ವೇಳೆ ಪ್ರಧಾನಿ ಮೋದಿಯವರೇ ಅವರಿಗೆ ಬೆಂಬಲ ಘೋಷಿಸಿದ್ದರು. ಅದನ್ನು ನೆನಪಿಸಿಕೊಂಡಾದರೂ ಸುಮಲತಾ ಬಿಜೆಪಿ ಬೆಂಬಲಿಸಬೇಕು’ ಎಂದು ಬಿಜೆಪಿ ಬೆಂಬಲಿಗರು ಹೇಳುತ್ತಾರೆ.

‘ಅಂಬರೀಷ್‌ ಅವರು ಅಪ್ಪಟ ಕಾಂಗ್ರೆಸ್ಸಿಗ, ಸುಮಲತಾ ಗೆಲುವಿಗೆ ಕಾಂಗ್ರೆಸ್‌ ಮುಖಂಡರ ಕೊಡುಗೆ ಬಹಳ ದೊಡ್ಡದಿದೆ. ಹೀಗಾಗಿ ಅವರು ಕಾಂಗ್ರೆಸ್‌ ಬೆಂಬಲಿಸುತ್ತಾರೆ’ ಎಂದು ಕಾಂಗ್ರೆಸ್‌ ಮುಖಂಡರು ಹೇಳುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.