ADVERTISEMENT

ಮಂಡ್ಯ: ತಮಿಳುನಾಡಿಗೆ ನೀರು ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2020, 13:31 IST
Last Updated 20 ಜುಲೈ 2020, 13:31 IST

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 107 ಅಡಿ ದಾಟಿದೆ. ನೀರಿನ ಮಟ್ಟ ಹೆಚ್ಚಾಗುತ್ತಿದ್ದಂತೆ ತಮಿಳುನಾಡಿಗೂ ನೀರು ಹರಿಸಲಾಗುತ್ತಿದೆ.

ಸುಪ್ರೀಂ ಕೋರ್ಟ್‌ ಆದೇಶದ ಅನ್ವಯ ತಮಿಳುನಾಡಿಗೆ ಜುಲೈ ತಿಂಗಳಲ್ಲಿ 31.3 ಟಿಎಂಸಿ ಅಡಿ ನೀರು ಹರಿಸಬೇಕು. ಅದರಂತೆ ನಿತ್ಯ 3,500 ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

‘ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರೂಪಿಸಿರುವ ಅಂತರರಾಜ್ಯ ವ್ಯಾಜ್ಯಗಳ ಸೆಲ್‌ ಅಧಿಕಾರಿಗಳ ಸೂಚನೆಯಂತೆ ನೀರು ಹರಿಸಲಾಗುತ್ತಿದೆ’ ಎಂದು ನಿಗಮದ ಅಧೀಕ್ಷಕ ಎಂಜಿನಿಯರ್‌ ವಿಜಯ್‌ಕುಮಾರ್ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.