ADVERTISEMENT

‘ಕೂಲಿಕಾರರ ಬದುಕಿನ ಮೇಲೆ ಕೇಂದ್ರದ ಬರೆ’

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2023, 16:30 IST
Last Updated 27 ಫೆಬ್ರುವರಿ 2023, 16:30 IST
ಮಳವಳ್ಳಿ ಪಟ್ಟಣದ ಅನಂತ್ ರಾಂ ವೃತ್ತದ ಬಳಿ ಸಿಪಿಎಂ ಪ್ರಚಾರಾಂದೋಲನ ನಡೆಯಿತು
ಮಳವಳ್ಳಿ ಪಟ್ಟಣದ ಅನಂತ್ ರಾಂ ವೃತ್ತದ ಬಳಿ ಸಿಪಿಎಂ ಪ್ರಚಾರಾಂದೋಲನ ನಡೆಯಿತು   

ಪ್ರಜಾವಾಣಿ ವಾರ್ತೆ

ಮಳವಳ್ಳಿ: ದೇಶದ ಯುವಸಮೂಹಕ್ಕೆ ಸಮರ್ಪಕವಾಗಿ ಉದ್ಯೋಗ ನೀಡಲು ಶಕ್ತಿ ಇಲ್ಲದ ಬಿಜೆಪಿ ಸರ್ಕಾರ ದೇಶದಲ್ಲಿ ಆಡಳಿತ ನಡೆಸುತ್ತಿರುವುದು ದುರಂತದ ಸಂಗತಿ ಎಂದು ಸಿಪಿಎಂ ಜಿಲ್ಲಾ
ಸಮಿತಿ ಸದಸ್ಯ ಜಿ.ರಾಮಕೃಷ್ಣ ಹೇಳಿದರು.

ಪಟ್ಟಣದ ಅನಂತರಾಂ ವೃತ್ತದ ಬಳಿ ಸಿಪಿಎಂ ಹಮ್ಮಿಕೊಂಡಿದ್ದ ಪ್ರಚಾರಾಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ADVERTISEMENT

ನರೇಗಾ ಯೋಜನೆಗಾಗಿ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅನುದಾನ ಕಡಿತಗೊಳಿಸಿ ಕೂಲಿಕಾರರ ಬದುಕಿನ ಮೇಲೆ ಬರೆ ಎಳೆದಿದೆ. ದೇಶದ ಜನರು ಕೋವಿಡ್‌ನಿಂದ ಸಂಕಷ್ಟ ಎದುರಿಸುತ್ತಿದ್ದು, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಕೇಂದ್ರದ ಬಜೆಟ್‌ನಲ್ಲಿ ಯಾವುದೇ ಯೋಜನೆ ಘೋಷಣೆ ಮಾಡದೆ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.

ತಾಲ್ಲೂಕು ಘಟಕದ ಕಾರ್ಯದರ್ಶಿ ಸುಶೀಲಾ, ಮುಖಂಡರಾದ ವಿ.ಭಾಗ್ಯಮ್ಮ, ಗೌರಮ್ಮ, ಕೃಷ್ಣ, ಎಲ್.ಶಿವಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.