ADVERTISEMENT

ಮಂಡ್ಯ ಜಿ.ಪಂ ಸಾಮಾನ್ಯ ಸಭೆ 6ನೇ ಬಾರಿ ಮೂಂದೂಡಿಕೆ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2020, 11:21 IST
Last Updated 13 ಅಕ್ಟೋಬರ್ 2020, 11:21 IST

ಮಂಡ್ಯ: ರಾಜಕೀಯ ಕಾರಣಗಳಿಂದಾಗಿ ಕಳೆದ ಒಂದೂವರೆ ವರ್ಷದಿಂದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ನಡೆದಿಲ್ಲ. ಇದರಿಂದ ಜಿಲ್ಲೆಯಾದ್ಯಂತ ಅಭಿವೃದ್ಧಿ ಕಾರ್ಯಗಳು ನನೆಗುದಿಗೆ ಬಿದ್ದಿದ್ದು ಸರ್ಕಾರದ ಅನುದಾನಗಳು ವಾಪಸ್‌ ಹೋಗುವ ಅಪಾಯ ಎದುರಾಗಿದೆ.

ಕೋರಂ ಕೊರತೆಯ ಕಾರಣದಿಂದಾಗಿ ಮಂಗಳವಾರ 6ನೇ ಬಾರಿಗೆ ಸಾಮಾನ್ಯ ಸಭೆ ಮುಂದೂಡಲಾಯಿತು. ಸದಸ್ಯರು ಜಿ.ಪಂ ಕಚೇರಿಗೆ ಬಂದರೂ ಸಾಮಾನ್ಯ ಸಭೆಗೆ ಬರಲಿಲ್ಲ. ಅಧ್ಯಕ್ಷೆ ನಾಗರತ್ನಾ ಸ್ವಾಮಿ ಹಾಗೂ ಜೆಡಿಎಸ್‌ ಸದಸ್ಯರ ನಡುವಿನ ಅಧಿಕಾರದ ಕಿತ್ತಾಟದಿಂದಾಗಿ 2020–21ನೇ ಸಾಲಿನ ಬಜೆಟ್‌ ಮಂಡನೆಯೂ ಸಾಧ್ಯವಾಗಿಲ್ಲ.

ಜೆಡಿಎಸ್‌ನಿಂದ ಗೆಲುವು ಕಂಡಿದ್ದ ನಾಗರತ್ನಾ ಒಪ್ಪಂದದಂತೆ ಕಳೆದ ವರ್ಷವೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿತ್ತು. ಅವರ ಪತಿ ಸ್ವಾಮಿ ಬಿಜೆಪಿಗೆ ಸೇರ್ಪಡೆಯಾಗಿದ್ದು ನಾಗರತ್ನಾ ಅವರ ಜೆಡಿಎಸ್‌ ಜೊತೆಗಿನ ಸಂಬಂಧ ಹಳಸಿದೆ. ಜೆಡಿಎಸ್‌ ಮುಖಂಡರ ರಾಜೀನಾಮೆ ಒತ್ತಡ ತಳ್ಳಿಹಾಕುತ್ತಿರುವ ಅವರು ಅಧ್ಯಕ್ಷೆ ಸ್ಥಾನದಲ್ಲಿ ಮುಂದುವರಿಯುತ್ತಿದ್ದಾರೆ. ಹೀಗಾಗಿ ಜೆಡಿಎಸ್‌ ಸದಸ್ಯರು ಒಂದೂವರೆ ವರ್ಷದಿಂದ ಸಾಮಾನ್ಯ ಸಭೆಗೆ ಹಾಜರಾಗದೆ ಅಧ್ಯಕ್ಷೆಗೆ ಅಸಹಾಕಾರ ತೋರುತ್ತಿದ್ದಾರೆ.

ADVERTISEMENT

ಅನುದಾನ ಬಳಸಿಕೊಳ್ಳಲು ಜಿ.ಪಂ ವಿಫಲವಾಗಿರುವ ಕಾರಣ 15ನೇ ಹಣಕಾಸು ಯೋಜನೆ, ಕುಡಿಯುವ ನೀರಿನ ಕಾಮಗಾರಿ, ಮೂಲ ಸೌಲಭ್ಯಗಳ ಕೋಟ್ಯಂತರ ರೂಪಾಯಿ ವಾಪಸ್‌ ಹೋಗುವ ಸ್ಥಿತಿ ಎದುರಾಗಿದೆ.

‘6 ಬಾರಿ ಸಾಮಾನ್ಯ ಸಭೆ ಮುಂದೂಡಿಕೆಯಾಗಿರುವ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಸರ್ಕಾರ ಮಧ್ಯ ಪ್ರವೇಶ ಮಾಡಿ ಅನುದಾನ ಬಳಕೆಗೆ ಅವಕಾಶ ಮಾಡಿಕೊಡುವಂತೆ ಕೋರಲಾಗುವುದು’ ಎಂದು ಜಿ.ಪಂ ಸಿಇಒ ಜುಲ್ಫಿಕರ್‌ ಉಲ್ಲಾ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.