ADVERTISEMENT

ಜೋಡುಪಾಲದಲ್ಲಿ ಮಹಿಳೆಯ ಬರ್ಬರ ಕೊಲೆ

ಆಸ್ತಿ ವೈಷಮ್ಯವೇ ಕೊಲೆಗೆ ಕಾರಣ? ಸ್ಥಳಕ್ಕೆ ಗ್ರಾಮಾಂತರ ಪೊಲೀಸರ ಭೇಟಿ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2019, 10:13 IST
Last Updated 17 ಡಿಸೆಂಬರ್ 2019, 10:13 IST

ಮಡಿಕೇರಿ: ಆಸ್ತಿ ವೈಷಮ್ಯದಿಂದ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜೋಡುಪಾಲದ ಕುಡಿಯುರ ಕಾಲೊನಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಅಬ್ಬಿಕೊಲ್ಲಿಯ ನಿವಾಸಿ ಹೊನ್ನಮ್ಮ ಕೊಲೆಯಾದ ಮಹಿಳೆ.

ಹೊನ್ನಮ್ಮ ಅವರ ಸಂಬಂಧಿ ಆನಂದ್‌ ಎಂಬಾತನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಎರಡು ಕುಟುಂಬಗಳ ನಡುವೆ ಆಸ್ತಿ ಸಂಬಂಧ ಗಲಾಟೆ ಇತ್ತು ಎನ್ನಲಾಗಿದೆ. ಕುಡಿಯರ ಕಾಲೊನಿಗೆ ಭೇಟಿ ನೀಡಿದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ADVERTISEMENT

ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.