ADVERTISEMENT

ಅನ್ಯ ಕಾರ್ಯಕ್ಕೆ ಮಕ್ಕಳ ಬಳಕೆ ಮಾಡಿಲ್ಲ: ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2012, 8:25 IST
Last Updated 3 ಜನವರಿ 2012, 8:25 IST

ಮೈಸೂರು: ಮೈಸೂರು ತಾಲ್ಲೂಕು ವರುಣಾ ಹೋಬಳಿ ಸಿದ್ದರಾಮನಹುಂಡಿ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಶೌಚಾಲಯ ಸ್ವಚ್ಛತೆ ಹಾಗೂ ಕಸಗುಡಿಸುವ ಕೆಲಸಕ್ಕೆ ಬಳಸಲಾಗುತ್ತಿದೆ ಎಂಬ ವರದಿ ಸತ್ಯಕ್ಕೆ ದೂರವಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ಎನ್.ಮಹೇಂದ್ರ ತಿಳಿಸಿದ್ದಾರೆ.

ಸೋಮವಾರ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಅವರು, ಶಾಲೆಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಪತ್ರಿಕೆಗಳಿಗೆ ಈ ಕುರಿತು ಯಾರೋ ತಪ್ಪು ಮಾಹಿತಿ ನೀಡಿದ್ದಾರೆ. ವರುಣಾ ಹೋಬಳಿಯಲ್ಲೇ ಇದು ಅತ್ಯುತ್ತಮ ಶಾಲೆಯಾಗಿದೆ. ಶಾಲೆಯ ಶಿಕ್ಷಕರು, ಬಿಸಿಯೂಟದ ಸಿಬ್ಬಂದಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.