ನಂಜನಗೂಡು: ತಾಲ್ಲೂಕಿನ ನಾಗಾಣಪುರ ಗ್ರಾಮದಲ್ಲಿ ಶುಕ್ರವಾರ ಆಕಸ್ಮಿಕ ಬೆಂಕಿ ಅವಘಡದಿಂದ ಹುಲ್ಲಿನ ಮೆದೆ ಹಾಗೂ ಎರಡು ವಾಸದ ಮನೆಗಳು ಸುಟ್ಟು ಭಸ್ಮವಾದವು.
ಮಹೇಶ್ ಹಾಗೂ ಸ್ವಾಮಿ ಎಂಬುವವರಿಗೆ ಸೇರಿದ ಮನೆ ಹಾಗೂ ಹುಲ್ಲಿನ ಮೆದೆ ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣವಾಗಿ ಸುಟ್ಟುಹೋದವು. ಮನೆಯಲ್ಲಿದ್ದವರು ಹೊರಗೆ ಓಡಿಬಂದು ಪ್ರಾಣಾಪಾಯದಿಂದ ಪರಾಗಿದ್ದಾರೆ.
ಮನೆಯಲ್ಲಿದ್ದ ದವಸ– ಧಾನ್ಯ ಹಾಗೂ ಗೃಹೋಪಯೋಗಿ ವಸ್ತುಗಳು ಬೆಂಕಿಗೆ ಆಹುತಿಯಾದವು.ಗ್ರಾಮಸ್ಥರು ಬೆಂಕಿ ನಂದಿಸಲು ಮಾಡಿದ ಪ್ರಯತ್ನ ವ್ಯರ್ಥವಾಯಿತು. ಅಗ್ನಿಶಾಮಕ ಸಿಬ್ಬಂದಿ ಧಾವಿಸುವಷ್ಟರಲ್ಲಿ ಮನೆಗಳು ಭಸ್ಮವಾಗಿದ್ದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.