ADVERTISEMENT

ಗುತ್ತಿಗೆ ನೌಕರರ ಪ್ರತಿಭಟನೆ

ಕೆಲಸದಿಂದ ವಜಾಗೊಳಿಸಿದ್ದಕ್ಕೆ ಖಂಡನೆ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2018, 10:28 IST
Last Updated 6 ಏಪ್ರಿಲ್ 2018, 10:28 IST

ಮೈಸೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ 61 ನೌಕರರನ್ನು ಕೆಲಸದಿಂದ ತೆಗೆದುಹಾಕಿದ ಬಿಎಸ್‌ಎನ್‌ಎಲ್‌ ಕ್ರಮವನ್ನು ಖಂಡಿಸಿ ರಾಜ್ಯ ಬಿಎಸ್‌ಎನ್‌ಎಲ್‌ ಗುತ್ತಿಗೆ ನೌಕರರ ಸಂಘದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.ಜಯಲಕ್ಷ್ಮಿಪುರಂನ ಕೇಂದ್ರ ಕಚೇರಿಯ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಎಲ್ಲ ನೌಕರರನ್ನು ಕೂಡಲೇ ಮರುನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 61 ನೌಕರರನ್ನು ಏ.1ರಂದು ವಜಾಗೊಳಿಸಲಾಗಿದೆ. ಇದೇ ಉದ್ಯೋಗ ನಂಬಿಕೊಂಡು ಬದುಕುತ್ತಿದ್ದವರು ಬೀದಿಗೆ ಬೀಳುವ ಸ್ಥಿತಿಗೆ ತಲುಪಿದ್ದಾರೆ. ಕಾರ್ಮಿಕ ಕಾನೂನು ಗಾಳಿಗೆ ತೂರಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಲಸದ ಅವಧಿ ಮುಗಿದ ಮೇಲೂ ಅಧಿಕಾರಿಗಳ ತೋಟ ಹಾಗೂ ಮನೆಯಲ್ಲಿ ಕೆಲಸ ಮಾಡಬೇಕಿತ್ತು. ಇದನ್ನು ಪ್ರಶ್ನಿಸಿದ ಕಾರಣಕ್ಕೆ ಕಾರ್ಮಿಕರ ಮೇಲೆ ಸೇಡು ತೀರಿಸಿಕೊಳ್ಳಲಾಗಿದೆ. ಈ ಕಿರುಕುಳ ಕೂಡಲೇ ನಿಲ್ಲಬೇಕು. ಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.