ADVERTISEMENT

ನಿಫಾ ವೈರಸ್‌; ಜಾಗೃತಿ ಸಭೆ

​ಪ್ರಜಾವಾಣಿ ವಾರ್ತೆ
Published 28 ಮೇ 2018, 8:35 IST
Last Updated 28 ಮೇ 2018, 8:35 IST

ಹುಣಸೂರು: ನಿಫಾ ವೈರಸ್‌ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯ ಕ್ರಮ ಅನುಸರಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದೇವತಾಲಕ್ಷ್ಮಿ ಹೇಳಿದರು.

ತಾಲ್ಲೂಕಿನ ನೇರಳಕುಪ್ಪೆ ಪಂಚಾಯಿತಿ ವ್ಯಾಪ್ತಿಯ ವಿಜಯಪುರ ಕಾಲೊನಿಯಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.

ವಿಜಯಪುರ ಕಾಲೊನಿ ನಿವಾಸಿಗಳು ಕೇರಳ ರಾಜ್ಯದೊಂದಿಗೆ ವ್ಯಾಪಾರ ವಹಿವಾಟು ಹೊಂದಿದ್ದು, ಸ್ಥಳಿಯರು ಕೇರಳ ರಾಜ್ಯಕ್ಕೆ ಹೋಗಿ ಬಂದ ನಂತರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ADVERTISEMENT

ಆರೋಗ್ಯ ಇಲಾಖೆ ಹಿರಿಯ ಆರೋಗ್ಯ ಸಹಾಯಕ ಶಿವನಂಜು ಮಾತನಾಡಿ, ಮುಂಗಾರು ಮಳೆ ರಾಜ್ಯಕ್ಕೆ ಪ್ರವೇಶಿಸುತ್ತಿದ್ದು, ಮನೆ ಸುತ್ತಲೂ ಸೊಳ್ಳೆ ಬಾರದಂತೆ ಹಾಗೂ ಮಳೆ ನೀರು ಸಂಗ್ರಹವಾಗದಂತೆ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಕಡೆಮನುಗನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸುಂದರಬಾಯಿ, ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.