ಮೈಸೂರು: ಉದಯಗಿರಿಯ ಲೀಡ್ಸ್ ಜ್ಯೋತಿ ಪಬ್ಲಿಕ್ ಶಾಲೆ ಬಳಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ರಾಘವೇಂದ್ರ ನಗರದ ನಿವಾಸಿ ಸುರೇಶ್ ಅಲಿಯಾಸ್ ಚಿನ್ನ ಕೊಲೆಯಾದ ಯುವಕ. ಹಳೆ ದ್ವೇಷದ ಹಿನ್ನೆಲೆ ಈ ಕೊಲೆ ನಡೆದಿದೆ ಎನ್ನಲಾಗಿದೆ.
ಔಷಧ ತರಲು ಔಷಧಿ ಅಂಗಡಿಗೆ ತೆರಳಿದಾಗ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.