ಮೈಸೂರು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಯುಜಿಸಿ ಸ್ವಾಯತ್ತ ಸ್ಥಾನಮಾನ ನೀಡಿರುವುದು ಸ್ವಾಗತಾರ್ಹ ವಿಚಾರ ಎಂದು ವಿಶ್ವಮಾನವ ಮೈಸೂರು ವಿಶ್ವವಿದ್ಯಾನಿಲಯ ನೌಕರರ ವೇದಿಕೆ ಅಧ್ಯಕ್ಷ ಆರ್.ವಾಸುದೇವ ಕೃತಜ್ಞತೆ ಸಲ್ಲಿಸಿದ್ದಾರೆ.
ಸ್ವಾಯತ್ತ ಸ್ಥಾನಮಾನ ನೀಡಿರುವುದರಿಂದ ಹೊಸ ಕೋರ್ಸುಗಳ ಆರಂಭ, ಹೊಸ ಪಠ್ಯಕ್ರಮ ರೂಪಿಸಲು ಯುಜಿಸಿ ಆಣತಿಗೆ ಕಾಯದೆ ವಿ.ವಿಯು ಸ್ವಂತ ನಿರ್ಧಾರ ಕೈಗೊಳ್ಳುವ ಸ್ವಾತಂತ್ರ್ಯ ಹೊಂದಿದೆ. ಪ್ರೊ.ಸಿ.ಬಸವರಾಜು ಅವರು ಪ್ರಭಾರಿ ಕುಲಪತಿ ಆಗಿರುವ ಸಮಯದಲ್ಲೇ ಸ್ವಾಯತ್ತ ಸ್ಥಾನಮಾನ ಸಿಕ್ಕಿರುವುದು ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.